Webdunia - Bharat's app for daily news and videos

Install App

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೇಸ್ ನಿಂದ ಟಿಕೆಟ್ ಘೋಷಣೆ

Webdunia
ಸೋಮವಾರ, 23 ಮೇ 2022 (21:21 IST)
ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​ ಘೋಷಿಸಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್​​ ಜಬ್ಬಾರ್​ಗೆ ಟಿಕೆಟ್​ ನೀಡಿ ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಅಂತಿಮಗೊಳಿಸಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೇಲ್ಮನೆ ಟಿಕೆಟ್ ಸರ್ಕಸ್ ಫೈಟ್ ಜೋರಾಗಿದ್ದು ವಿಧಾನ ಪರಿಷತ್​ ಚುನಾವಣೆಗೆ ಕಾಂಗ್ರೆಸ್​ ಟಿಕೆಟ್​ ಘೋಷಿಸಿದೆ.
 
ನಾಗರಾಜ್ ಯಾದವ್ ಮತ್ತು ಅಬ್ದುಲ್​​ ಜಬ್ಬಾರ್​ಗೆ ಟಿಕೆಟ್​ ನೀಡಿ ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಅಂತಿಮಗೊಳಿಸಿದೆ. ದಾವಣಗೆರೆ ಮೂಲದ ಅಬ್ದಲ್ ಜಬ್ಬಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾಗಿದ್ದಾರೆ. ಈ ಹಿಂದೆ ಕೂಡಾ ವಿಧಾನ ಪರಿಷತ್ ಸದಸ್ಯರಾಗಿದ್ದರು.
 
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರವೇ ಕೊನೆಯ ದಿನ. ಹೀಗಾಗಿ ಸದ್ಯ ಕಾಂಗ್ರೆಸ್ ಇಬ್ಬರ ಹೆಸರನ್ನು ಅಂತಿಮಗೊಳಿಸಿದೆ. ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿ ವರಿಷ್ಠರ ಭೇಟಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು, ವರಿಷ್ಠರ ಸಮ್ಮುಖದಲ್ಲಿಯೇ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಕೊನೆಗೆ ಅಂತಿಮ ಪಟ್ಟಿಯ ಸ್ಪಷ್ಟತೆ ಇಲ್ಲದೆ ಬರಿಗೈಲಿ ವಾಪಸ್ಸಾಗಿದ್ದರು. ಪಕ್ಷದ ಅಭ್ಯರ್ಥಿಗಳು ಯಾರಾಗಬೇಕು ಎಂಬ ಕುರಿತು ಚರ್ಚಿಸಿ ಭಾನುವಾರ ಪಟ್ಟಿ ರವಾನಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಸೂಚಿಸಿತ್ತು. ಸದ್ಯ ಈಗ ಇಬ್ಬರ ಹೆಸರನ್ನು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments