Publish Date: Sat, 26 Aug 2023 (08:28 IST)
Updated Date: Sat, 26 Aug 2023 (10:30 IST)
ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ನೋಡಬೇಕಾಗುತ್ತೆ. ಆಗಸ್ಟ್ ನಲ್ಲಿ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ.