Publish Date: Fri, 08 Dec 2023 (17:20 IST)
Updated Date: Fri, 08 Dec 2023 (17:42 IST)
ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಥೋಡ್ ಮೇಲೆ ಹಲ್ಲೆಯಾಗಿದ್ದು ಅದಕ್ಕೆ ರಾಜಕೀಯ ವಿರೋಧಿಗಳು ಕಾರಣ ಎಂದು ಆರೋಪಿಸಿ ದೂರು ನೀಡಿದ್ದರು. ಆದರೆ, ಈಗ ಅದರ ವಿಧಿವಿಜ್ಞಾನ ವರದಿ ಬಂದಿದ್ದು, ಅವರ ಮೇಲೆ ಯಾರೂ ಹಲ್ಲೆ ಮಾಡಿಲ್ಲ ಎಂದು ತಿಳಿದುಬಂದಿದೆ.
ಇನ್ನು ನಾನೆ ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿದ ಮಣಿಕಂಠ ರಾಥೋಡ್ ಹಾಗೂ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುತ್ತೇನೆ ಅಂತಾ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.