Select Your Language

Notifications

webdunia
webdunia
webdunia
webdunia

ತನ್ವೀರ್ ಸೇಠ್ ಸಮರ್ಥನೆ ನಾಚಿಕೆಗೇಡು: ಶ್ರೀನಿವಾಸ್ ಪ್ರಸಾದ್

ತನ್ವೀರ್ ಸೇಠ್
ಚಾಮರಾಜನಗರ , ಮಂಗಳವಾರ, 15 ನವೆಂಬರ್ 2016 (18:26 IST)
ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭದಲ್ಲಿ ಯುವತಿಯರ ಅರೆನಗ್ನ ಚಿತ್ರ ವೀಕ್ಷಿಸಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಟಾಂಗ್ ನೀಡಿದ್ದಾರೆ.
 
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಆಯೋಜಿತ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮೊಬೈಲ್ ತೆಗೆದುಕೊಂಡು ಹೋಗಿದ್ದೆ ತಪ್ಪು. ಕಾರ್ಯಕ್ರಮದಲ್ಲಿ ಸಚಿವರು ಯುವತಿಯರ ಅರೆನಗ್ನ ಚಿತ್ರ ವೀಕ್ಷಿಸುತ್ತಿರುವ ಕುರಿತು ಮಾಧ್ಯಮಗಳು ಸುಳ್ಳು ಸುದ್ದಿ ತೋರಿಸಿಲ್ಲ ಎಂದು ಹೇಳಿದರು.
 
ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಗಾಂಭಿರ್ಯತೆಯಿಂದ ನಡೆಯಬೇಕಿತ್ತು. ಆದರೆ, ಸಮಾರಂಭದಲ್ಲಿ ಶಿಕ್ಷಣ ಸಚಿವರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ತನ್ವೀರ್ ಸೇಠ್ ಅವರು ರಾಯಚೂರಿನಲ್ಲಿ ನಡೆದ ಟಿಪ್ಪು ಸುಲ್ತಾನ್ ಜಯಂತಿ ವೇಳೆ ಯುವತಿಯರ ಅರೆನಗ್ನ ಚಿತ್ರ ವೀಕ್ಷಿಸಿದ್ದಾರೆ ಎನ್ನುವ ದೃಶ್ಯದ ತುಣುಕುಗಳನ್ನು ಸುದ್ದಿವಾಹಿನಿ ಬಿತ್ತರ ಮಾಡಿತ್ತು. ಇದು ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಕಾರಣವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಸಾಜ್ ಪಾರ್ಲರ್'ನಲ್ಲಿ ಬೆಡಗಿಯರೊಂದಿಗೆ ಮಾಂಸದಂಧೆ!