Webdunia - Bharat's app for daily news and videos

Install App

‘ಆ ಕೆಲಸ ಮಾಡಿದ ಪೊಲೀಸರಿಗೆ ಧಿಕ್ಕಾರ ಧಿಕ್ಕಾರ’

Webdunia
ಮಂಗಳವಾರ, 17 ಡಿಸೆಂಬರ್ 2019 (18:28 IST)
ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ವಿರೋಧಿಸಿ ಧಿಕ್ಕಾರ ಕೂಗಲಾಗಿದೆ.

ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡ ನಗರದ ಕಡಪಾ ಮೈದಾನದಿಂದ ಹೊರಟ ಪ್ರತಿಭಟನಾ ರ್ಯಾಲಿಯು ವಿವೇಕಾನಂದ ವೃತ್ತವನ್ನು ಸುತ್ತು ಹಾಕಿ ಮತ್ತೆ ಕಡಪಾ ಮೈದಾನಕ್ಕೆ ತಲುಪಿತು. ದೇಶಾದ್ಯಂತ ವಿರೋಧಿಸಲ್ಪಡುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಮತ್ತು ಅಲಿಘರ ಮುಸ್ಲಿಂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಕೂಡಾ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಆ ವೇಳೆ ಕಿಡಿಗೇಡಿಗಳು ಮಾಡಿದ ಗಲಿಬಿಲಿಯಿಂದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದು ವಿದ್ಯಾರ್ಥಿಗಳ ಚಳುವಳಿಯಲ್ಲಿ ಕರಾಳ ದಿನವಾಗಿದೆ. ಅದಕ್ಕಾಗಿ ಈ ದಾಳಿಗೆ ಹೊಣೆಗಾರರಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಸಂಘಟಕರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments