Webdunia - Bharat's app for daily news and videos

Install App

ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬ: ಕಲಬುರಗಿ ಜಿಲ್ಲಾಧಿಕಾರಿಯ ಕಾರು ಜಪ್ತಿಗೆ ಆದೇಶಿಸಿದ ನ್ಯಾಯಾಲಯ

Webdunia
ಬುಧವಾರ, 16 ಫೆಬ್ರವರಿ 2022 (20:44 IST)
ಭೀಮಾ ಎತ್ತು ನೀರಾವರಿಯ ಯೋಜನೆಯ ಅಭಿವೃದ್ಧಿಗೆ ಜಮೀನು ನೀಡಿದ್ದ ರೈತನೋರ್ವನಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿದ ಕಾರಣಕ್ಕೆ ಕಲಬುರಗಿ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡಿರುವ ಘಟನೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.
ಅಫ್ಝಲ್ ಪುರ ತಾಲೂಕಿನ ಉಡಚಣ ನಿವಾಸಿಯಾಗಿರುವ ಕಲ್ಲಪ್ಪ ನಾಗಪ್ಪ ಮೈತ್ರಿ ಎಂಬವರು ಭೀಮಾ ಎತ್ತು ನೀರಾವರಿಯ ಯೋಜನೆಯ ಅಭಿವೃದ್ಧಿಗಾಗಿ 2013ರಲ್ಲಿ 33 ಗುಂಟೆ ಜಮೀನು ನೀಡಿದ್ದರು. ಈ ಜಮೀನಿಗೆ ಪರಿಹಾರ ನೀಡುವಂತೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 2019ರಲ್ಲಿ ಆದೇಶ ನೀಡಿತ್ತು. ಅದರಂತೆ ಕಲ್ಲಪ್ಪರಿಗೆ 7.41 ಲಕ್ಷರ ರೂ. ಪರಿಹಾರ ಸಿಗಬೇಕಿತ್ತು. ಆದರೆ ಇದುವರೆಗೆ ಸಂತ್ರಸ್ತರಿಗೆ ಪರಿಹಾರ ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಕಲ್ಲಪ್ಪ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಬಗ್ಗೆ ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶದಂತೆ ಭೂ ಸಂತ್ರಸ್ತರಿಗೆ ಪರಿಹಾರ ನೀಡದ ಕಾರಣ ಕಲಬುರಗಿ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡಲು ಜಿಲ್ಲಾ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಸಂತ್ರಸ್ತನಿಗೆ ಪರಿಹಾರದ ಮೊತ್ತ ನೀಡುವವರೆಗೆ ಅಥವಾ ನ್ಯಾಯಾಲಯದ ಮುಂದಿನ ಆದೇಶದವರೆಗೆ ಕಾರನ್ನು ವಶದಲ್ಲಿರಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಅದರಂತೆ ಸಂಬಂಧಪಟ್ಟ ಅಧಿಕಾರಿಗಳು ಕಾರು ಜಪ್ತಿಗೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments