Webdunia - Bharat's app for daily news and videos

Install App

ದೆಹಲಿ ಲಿಕ್ಕರ್ ಹಗರಣ: ಕವಿತಾಗೆ ಸಂಕಷ್ಟ

Webdunia
ಬುಧವಾರ, 21 ಡಿಸೆಂಬರ್ 2022 (15:22 IST)
ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ. ತೆಲಂಗಾಣ ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಮತ್ತು ಅವರ ಪಾಲುದಾರ ಒಟ್ಟಾಗಿ ಲಿಕ್ಕರ್ ಕಂಪನಿ ಇಂಡೊ ಸ್ಪಿರಿಟ್​​ನಲ್ಲಿ ಶೇಕಡಾ 65ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ಹೇಳಿದೆ. ಕವಿತಾ ಅವರ ಹೆಸರು ಆರಂಭದಿಂದಲೂ ದೆಹಲಿ ಲಿಕ್ಕರ್ ಹಗರಣದಲ್ಲಿ ಕೇಳಿಬರುತ್ತಿದೆ. ಕಳೆದ ತಿಂಗಳು ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ED ಕವಿತಾ ಪ್ರತಿನಿಧಿಗಳ ಮೂಲಕ ಮದ್ಯದ ಕಂಪೆನಿಯಲ್ಲಿ ಪಾಲನ್ನು ಹೊಂದಿದ್ದು ಪ್ರತಿನಿಧಿಗಳನ್ನು ಗುರುತಿಸಿ ತನಿಖೆ ನಡೆಸಲಾಗಿದೆ ಎಂದು ಹೇಳಿದೆ. ED ವಿಶೇಷ ಕೋರ್ಟ್ ನಲ್ಲಿ ನ್ಯಾಯಾಧೀಶ ಎಂ.ಕೆ.ನಾಗ್ ಪಾಲ್ ಮುಂದೆ ಆರೋಪಪಟ್ಟಿಯನ್ನು ಸಲ್ಲಿಸಿದ್ದು ಪ್ರಕರಣದ ಗಂಭೀರತೆ ಮತ್ತು ತೀವ್ರತೆಯನ್ನು ಪರಿಗಣಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದೆ. ದೆಹಲಿ ಲಿಕ್ಕರ್ ಹಗರಣ ಬೆಳಕಿಗೆ ಬಂದ ರೀತಿಯನ್ನು ಜಾರಿ ನಿರ್ದೇಶನಾಲಯ ವಿವರವಾಗಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments