Webdunia - Bharat's app for daily news and videos

Install App

ಹಿಟ್ & ರನ್‌ಗೆ ಡೆಲಿವರಿ ಬಾಯ್ ಸಾವು

Webdunia
ಬುಧವಾರ, 21 ಜೂನ್ 2023 (15:58 IST)
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಡೆಡ್ಲಿ ಹಿಟ್​ ಅಂಡ್​ ರನ್​ ಪ್ರಕರಣ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಜಾಲಿ ರೈಡ್​ ಹೊರಟ ಯುವಕ-ಯುವತಿಯರು ಅಮಾಯಕನ ಪ್ರಾಣವನ್ನು ತೆಗೆದೇ ಬಿಟ್ಟಿದ್ದಾರೆ. ಅತಿ ವೇಗದ ಮೋಜಿನ ಹುಚ್ಚಾಟಕ್ಕೆ ಕುಟುಂಬದ ಆಧಾರವಾಗಿದ್ದ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ಆಸ್ಪತ್ರೆಗೆ ದಾಖಲಿಸದೇ ಅಲ್ಲಿಯೇ ಬಿಟ್ಟು ಪರಾರಿಯಾಗುವ ಮೂಲಕ ಮೃಗಗಳಿಗಿಂತಲೂ ಕಡೆಯಾಗಿ ವರ್ತಿಸಿದ್ದಾರೆ. ಆದರೆ, ತಾನೊಂದು ಬಗೆದರೆ ದೈವವೊಂದು ಬಗೆಯುತ್ತದೆ ಎಂಬ ಮಾತಿನಂತೆ ಮಾನವೀಯತೆ ಮರೆತು ಪರಾರಿ ಆಗುತ್ತಿದ್ದ ಲಜ್ಜಗೆಟ್ಟವರನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಿಟ್ ಅಂಡ್ ರನ್​ಗೆ ಬಲಿಯಾದ ವ್ಯಕ್ತಿಯನ್ನು ಜೊಮ್ಯಾಟೋ ಡೆಲಿವರಿ ಬಾಯ್ ಪವನ್ ಕುಮಾರ್​ ಎಂದು ಗುರುತಿಸಲಾಗಿದೆ. ಈತ ಎಚ್.ಡಿ.ಕೋಟೆ ಮೂಲದವನು. ಪವನ್​ ಸವಾರಿ ಮಾಡುತ್ತಿದ್ದ ಬೈಕ್​ಗೆ ಕಾರು ಗುದ್ದಿ ಸುಮಾರು 100 ಮೀಟರ್ ಎಳೆದೊಯ್ದಿದೆ. ರಕ್ತದ ಮಡುವಿನಲ್ಲೇ ಒದ್ದಾಡಿ ಪವನ್​ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಅಪಘಾತದ ಬೆನ್ನಲ್ಲೇ ಕಾರು ಚಾಲಕ ಬಿಟ್ಟು ಕಾರಲ್ಲಿದ್ದ ನಾಲ್ವರು ಅಲ್ಲಿಂದ ಎಸ್ಕೇಪ್ ಆಗಿದ್ದು, ಕಾರು ಚಾಲಕ ವಿನಾಯಕ್​ನನ್ನು ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments