ಹಿಟ್ & ರನ್‌ಗೆ ಡೆಲಿವರಿ ಬಾಯ್ ಸಾವು

Webdunia
ಬುಧವಾರ, 21 ಜೂನ್ 2023 (15:58 IST)
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಡೆಡ್ಲಿ ಹಿಟ್​ ಅಂಡ್​ ರನ್​ ಪ್ರಕರಣ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಜಾಲಿ ರೈಡ್​ ಹೊರಟ ಯುವಕ-ಯುವತಿಯರು ಅಮಾಯಕನ ಪ್ರಾಣವನ್ನು ತೆಗೆದೇ ಬಿಟ್ಟಿದ್ದಾರೆ. ಅತಿ ವೇಗದ ಮೋಜಿನ ಹುಚ್ಚಾಟಕ್ಕೆ ಕುಟುಂಬದ ಆಧಾರವಾಗಿದ್ದ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ಆಸ್ಪತ್ರೆಗೆ ದಾಖಲಿಸದೇ ಅಲ್ಲಿಯೇ ಬಿಟ್ಟು ಪರಾರಿಯಾಗುವ ಮೂಲಕ ಮೃಗಗಳಿಗಿಂತಲೂ ಕಡೆಯಾಗಿ ವರ್ತಿಸಿದ್ದಾರೆ. ಆದರೆ, ತಾನೊಂದು ಬಗೆದರೆ ದೈವವೊಂದು ಬಗೆಯುತ್ತದೆ ಎಂಬ ಮಾತಿನಂತೆ ಮಾನವೀಯತೆ ಮರೆತು ಪರಾರಿ ಆಗುತ್ತಿದ್ದ ಲಜ್ಜಗೆಟ್ಟವರನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಿಟ್ ಅಂಡ್ ರನ್​ಗೆ ಬಲಿಯಾದ ವ್ಯಕ್ತಿಯನ್ನು ಜೊಮ್ಯಾಟೋ ಡೆಲಿವರಿ ಬಾಯ್ ಪವನ್ ಕುಮಾರ್​ ಎಂದು ಗುರುತಿಸಲಾಗಿದೆ. ಈತ ಎಚ್.ಡಿ.ಕೋಟೆ ಮೂಲದವನು. ಪವನ್​ ಸವಾರಿ ಮಾಡುತ್ತಿದ್ದ ಬೈಕ್​ಗೆ ಕಾರು ಗುದ್ದಿ ಸುಮಾರು 100 ಮೀಟರ್ ಎಳೆದೊಯ್ದಿದೆ. ರಕ್ತದ ಮಡುವಿನಲ್ಲೇ ಒದ್ದಾಡಿ ಪವನ್​ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಅಪಘಾತದ ಬೆನ್ನಲ್ಲೇ ಕಾರು ಚಾಲಕ ಬಿಟ್ಟು ಕಾರಲ್ಲಿದ್ದ ನಾಲ್ವರು ಅಲ್ಲಿಂದ ಎಸ್ಕೇಪ್ ಆಗಿದ್ದು, ಕಾರು ಚಾಲಕ ವಿನಾಯಕ್​ನನ್ನು ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments