Webdunia - Bharat's app for daily news and videos

Install App

ಡೆಲಿವರಿ ವಿಳಂಬ ಮಾಡಿದ್ದಕ್ಕೆ ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಕೊಂದ ಡೆಲಿವರಿ ಬಾಯ್!

Webdunia
ಬುಧವಾರ, 1 ಸೆಪ್ಟಂಬರ್ 2021 (20:57 IST)
ಆರ್ಡರ್ ಮಾಡಿದ ಫುಡ್ ನೀಡಲು ತಡ ಮಾಡಿದ್ದಕ್ಕೆ ಸ್ವಿಗ್ಗಿ ಕಂಪನಿಯ ಡೆಲಿವರಿ ಬಾಯ್ ರೆಸ್ಟೋರೆಂಟ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ದೆಹಲಿಯ ಗ್ರೇಟರ್ ನೋಯ್ಡಾದಲ್ಲಿ ಸಂಭವಿಸಿದೆ.
ಆನ್ ಲೈನ್ ಮೂಲಕ ಬಂದ ಆರ್ಡರ್ ಗಳನ್ನು ಸ್ವಿಗ್ಗಿ ಮೂಲಕ ಆಹಾರ ಪೂರೈಸುವ ಜಮ್ ಜಮ್ ರೆಸ್ಟೋರೆಂಟ್ ನಡೆಸುತ್ತಿದ್ದ ಸುನೀಲ್ ಹತ್ಯೆಯಾಗಿದ್ದು, ಹತ್ಯೆ ಮಾಡಿದ ಡೆಲಿವರಿ ಬಾಯ್ ನಾಪತ್ತೆಯಾಗಿದ್ದಾನೆ.
ಸ್ವಿಗ್ಗಿ ಡೆಲಿವರಿ ಬಾಯ್ ಎರಡು ಆರ್ಡರ್ ಮಾಡಿದ್ದು, ನಾರಾಯಣ್ ಎಂಬ ಹೋಟೆಲ್ ಸಿಬ್ಬಂದಿ ಚಿಕನ್ ಬಿರಿಯಾನಿಯನ್ನು ತಕ್ಷಣವೇ ನೀಡಿದ್ದು, ಮತ್ತೊಂದು ಆರ್ಡರ್ ನೀಡಲು ಸ್ವಲ್ಪ ತಡವಾಗುತ್ತದೆ ಎಂದು ಹೇಳಿದ್ದಾನೆ. ಇದರಿಂದ ಅಸಮಾಧಾನಗೊಂಡ ಡಿಲಿವರಿ ಬಾಯ್ ನಿಂದಿಸಲು ಆರಂಭಿಸಿದ್ದಾನೆ. 
ಹೋಟೆಲ್ ಸಿಬ್ಬಂದಿ ಮತ್ತು ಡೆಲಿವರಿ ಬಾಯ್ ನಡುವೆ ಜಗಳ ಆರಂಭವಾಗಿದ್ದು, ಮಾಲೀಕ ಸುನೀಲ್ ಮಧ್ಯಪ್ರವೇಶಿಸಿದಾಗ ಡೆಲಿವರಿ ಬಾಯ್ ಗನ್ ತೆಗೆದು ಗುಂಡು ಹಾರಿಸಿದ್ದಾನೆ. ಡೆಲಿವರಿ ಬಾಯ್ ಕುಡಿದ ಮತ್ತಿನಲ್ಲಿದ್ದು ಅವನಿಗೆ ಜೊತೆಯಲ್ಲಿದ್ದ ಮತ್ತೊಬ್ಬ ಸಹಾಯ ಮಾಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments