Select Your Language

Notifications

webdunia
webdunia
webdunia
webdunia

ರುದ್ರೇಶ್ ಹಂತಕರಿಗೆ ಮರಣದಂಡನೆ ವಿಧಿಸಿ: ಆರ್‌ಎಸ್‍‌ಎಸ್

ರುದ್ರೇಶ್ ಹಂತಕರಿಗೆ ಮರಣದಂಡನೆ ವಿಧಿಸಿ: ಆರ್‌ಎಸ್‍‌ಎಸ್
ಬೆಂಗಳೂರು , ಶುಕ್ರವಾರ, 28 ಅಕ್ಟೋಬರ್ 2016 (16:10 IST)
ಆರ್‌ಎಸ್‍‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ದಕ್ಷಿಣ ಮಧ್ಯ ಕ್ಷೇತ್ರದ ಆರ್‌ಎಸ್‌ಎಸ್ ಸಂಘಚಾಲಕ ವಿ.ನಾಗರಾಜ್ ಒತ್ತಾಯಿಸಿದ್ದಾರೆ. 
ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರುದ್ರೇಶ್ ಕೊಲೆ ಪ್ರಕರಣದ ಹಂತಕರನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಅಭಿನಂದಿಸುತ್ತೇವೆ. ಪ್ರಕರಣದ ಮುಂದಿನ ತನಿಖೆ ಕುರಿತು ನಮಗೆ ಕುತೂಹಲವಿದೆ. ಬಂಧಿತರೆಲ್ಲರು ಪಿಪಿಐ ಹಾಗೂ ಎಸ್‌ಡಿಐಪಿ ಸಂಘಟನೆಯವರು. ಇವರೆಲ್ಲಾ ಜಿಹಾದಿ ಮನಸ್ಥಿತಿಯವರು. ಇವರಿಗೆ ಮರಣದಂಡನೆ ಶಿಕ್ಷೆಆಗಬೇಕು ಎಂದು ಆಗ್ರಹಿಸಿದರು. 
 
ರಾಜ್ಯದಲ್ಲಿ ಇದುವರೆಗೆ ನಡೆದಿರುವ ಸರಣಿ ಕೊಲೆ ಪ್ರಕರಣದಲ್ಲಿ ಪಿಪಿಐ ಹಾಗೂ ಎಸ್‌ಡಿಐಪಿ ಸಂಘಟನೆಯ ಕೈವಾಡವಿದ್ದು, ಇ ಎರಡು ಸಂಘಟನೆಯನ್ನು ನಿಷೇಧಿಸಿ ಎಂದು ಆರ್‌ಎಸ್‌ಎಸ್ ಒತ್ತಾಯಿಸಿದೆ. 
 
ಬೆಂಗಳೂರಿನಲ್ಲಿ ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಟೀಲ್ ಬ್ರಿಡ್ಜ್ ಕಾಮಗಾರಿಗೆ ಹಸಿರು ನ್ಯಾಯಪೀಠದಿಂದ ತಡೆಯಾಜ್ಞೆ