Webdunia - Bharat's app for daily news and videos

Install App

ರುದ್ರೇಶ್ ಹಂತಕರಿಗೆ ಮರಣದಂಡನೆ ವಿಧಿಸಿ: ಆರ್‌ಎಸ್‍‌ಎಸ್

Webdunia
ಶುಕ್ರವಾರ, 28 ಅಕ್ಟೋಬರ್ 2016 (16:10 IST)
ಆರ್‌ಎಸ್‍‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ದಕ್ಷಿಣ ಮಧ್ಯ ಕ್ಷೇತ್ರದ ಆರ್‌ಎಸ್‌ಎಸ್ ಸಂಘಚಾಲಕ ವಿ.ನಾಗರಾಜ್ ಒತ್ತಾಯಿಸಿದ್ದಾರೆ. 
ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರುದ್ರೇಶ್ ಕೊಲೆ ಪ್ರಕರಣದ ಹಂತಕರನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಅಭಿನಂದಿಸುತ್ತೇವೆ. ಪ್ರಕರಣದ ಮುಂದಿನ ತನಿಖೆ ಕುರಿತು ನಮಗೆ ಕುತೂಹಲವಿದೆ. ಬಂಧಿತರೆಲ್ಲರು ಪಿಪಿಐ ಹಾಗೂ ಎಸ್‌ಡಿಐಪಿ ಸಂಘಟನೆಯವರು. ಇವರೆಲ್ಲಾ ಜಿಹಾದಿ ಮನಸ್ಥಿತಿಯವರು. ಇವರಿಗೆ ಮರಣದಂಡನೆ ಶಿಕ್ಷೆಆಗಬೇಕು ಎಂದು ಆಗ್ರಹಿಸಿದರು. 
 
ರಾಜ್ಯದಲ್ಲಿ ಇದುವರೆಗೆ ನಡೆದಿರುವ ಸರಣಿ ಕೊಲೆ ಪ್ರಕರಣದಲ್ಲಿ ಪಿಪಿಐ ಹಾಗೂ ಎಸ್‌ಡಿಐಪಿ ಸಂಘಟನೆಯ ಕೈವಾಡವಿದ್ದು, ಇ ಎರಡು ಸಂಘಟನೆಯನ್ನು ನಿಷೇಧಿಸಿ ಎಂದು ಆರ್‌ಎಸ್‌ಎಸ್ ಒತ್ತಾಯಿಸಿದೆ. 
 
ಬೆಂಗಳೂರಿನಲ್ಲಿ ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments