Webdunia - Bharat's app for daily news and videos

Install App

ಹಂಪಿ ಉತ್ಸವಕ್ಕಾಗಿ ಭಿಕ್ಷೆ ಬೇಡ್ತಿನಿ ಎಂದ ಶಾಸಕ

Webdunia
ಭಾನುವಾರ, 2 ಡಿಸೆಂಬರ್ 2018 (17:31 IST)
ರಾಜ್ಯದ ಮೈತ್ರಿ ಸರ್ಕಾರಕ್ಕೆ ಐತಿಹಾಸಿಕ ಹಂಪಿ ಉತ್ಸವ ನಡೆಸಲು ಹಣದ ಕೊರತೆ ಇದೆ ಎಂದು ಹೇಳಿದರೆ ನಾವು ನಮ್ಮ ಪಕ್ಷದಿಂದ ಭಿಕ್ಷೆ ಬೇಡಿ ಉತ್ಸವ ನಡೆಸಲು ಸರ್ಕಾರಕ್ಕೆ ಹಣ ನೀಡಲಿದ್ದೇವೆ. ಹೀಗಂತ ಶಾಸಕ ಸವಾಲು ಹಾಕಿದ್ದಾರೆ.

ಹಂಪಿ ಉತ್ಸವ ನಡೆಸದೇ ಇರಲು ಸರಕಾರ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಬಳ್ಳಾಗಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಈ ರೀತಿಯಾಗಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿ ವರ್ಷದಂತೆ ವರ್ಷವೂ ಮೂರು ದಿನಗಳ ಕಾಲ ಉತ್ಸವ ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಹೊರ ಜಿಲ್ಲೆಯವರಾಗಿರುವುದರಿಂದ ಅವರಿಗೆ ಆಸಕ್ತಿ ಇಲ್ಲ. ಇದೇ ಜಿಲ್ಲೆಯವರಾಗಿದ್ದರೆ ಆಸಕ್ತಿ ಇರುತ್ತಿತ್ತು ಎಂದು ಆರೋಪಿಸಿದರು. ಹಂಪಿ ಉತ್ಸವ ನಡೆಸುವಂತೆ ತಿಂಗಳ 10ರಿಂದ ಆರಂಭಗೊಳ್ಳುವ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೆ ಮಾಡುವುದಾಗಿ ಹೇಳಿದರು.

ಉಪಚುನಾವಣೆಯಲ್ಲಿ ಗೆದ್ದೀವಿ ಎಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅದ್ದೂರಿ ಸಮಾರಂಭ ಮಾಡುವವರು ಹಂಪಿ ಉತ್ಸವಕ್ಕೆ ಬರಗಾಲ ಎನ್ನುವುದು ಸರಿಯಲ್ಲವೆಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments