Webdunia - Bharat's app for daily news and videos

Install App

ಪದವಿ ಪರೀಕ್ಷೆ ಮುಂದೂಡಲು ಆಗ್ರಹ

Webdunia
ಗುರುವಾರ, 1 ಸೆಪ್ಟಂಬರ್ 2022 (13:42 IST)
ಧಾರವಾಡ : ಸೆಪ್ಟೆಂಬರ್ 1 ರಿಂದ 20 ರವರೆಗೆ ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನಾ ಭರ್ತಿಗಾಗಿ ದೈಹಿಕ ಪರೀಕ್ಷೆ ನಡೆಯಲಿವೆ.

ಈ ದೈಹಿಕ ಪರೀಕ್ಷೆಗೆ ಸಾಕಷ್ಟು ವಿದ್ಯಾರ್ಥಿಗಳು ಹೋಗಲು ತಯಾರಿ ನಡೆಸಿದ್ದಾರೆ. ಆದರೆ ಈಗ ಆ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಆರಂಭವಾಗಿದೆ.

ಧಾರವಾಡ ಕರ್ನಾಟಕ ವಿವಿಯ ಪದವಿ ಪರೀಕ್ಷೆಗಳು ಕೂಡಾ ಇದೇ ಸಮಯದಲ್ಲಿ ಇವೆ. ಈಗಾಗಲೇ ಆಗಸ್ಟ್ 29 ರಿಂದ ಸೆಪ್ಟೆಂಬರ್ 20ರವರೆಗೆ ಕರ್ನಾಟಕ ವಿವಿ ಪರೀಕ್ಷಾ ದಿನಾಂಕ ಘೋಷಣೆ ಮಾಡಿ ಆಗಿದೆ. ಆದರೆ ಇದೇ ಸಮಯದಲ್ಲಿ ಸೇನಾ ಭರ್ತಿಯ ದೈಹಿಕ ಪರೀಕ್ಷೆ ಇವೆ.

ಕರ್ನಾಟಕ ವಿವಿ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಈಗ ಪದವಿ ಪರೀಕ್ಷೆ ಬರೆಯಬೇಕೋ ಅಥವಾ ಅಗ್ನಿಪಥ್ ದೈಹಿಕ ಪರೀಕ್ಷೆಗೆ ಹೋಗಬೇಕೋ ಎನ್ನುವ ಗೊಂದಲದಲ್ಲಿದ್ದಾರೆ.

ಹೀಗಾಗಿ ಕರ್ನಾಟಕ ವಿವಿಯ ಮೌಲ್ಯ ಮಾಪನ ಕುಲಸಚಿವರಿಗೆ ಮನವಿ ಕೊಟ್ಟು ಸೆಪ್ಟೆಂಬರ್ 20ರ ನಂತರ ಪದವಿ ಪರೀಕ್ಷೆ ನಡೆಸಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments