Webdunia - Bharat's app for daily news and videos

Install App

1 ಕೋಟಿ ಲಂಚಕ್ಕೆ ಬೇಡಿಕೆ: ಸಿಸಿಬಿ ಸಬ್ಇನ್ಸಪೆಕ್ಟರ್ ಸಸ್ಪೆಂಡ್

Webdunia
ಶನಿವಾರ, 12 ಜನವರಿ 2019 (17:12 IST)
ಜನರಿಗೆ ಮೋಸ ಮಾಡಿದ್ದ ಕಂಪನಿ ಬಳಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಸಿಬಿಯ ಸಬ್ಇನ್ಸ್ಪೆಕ್ಟರ್ ಮತ್ತು ಮುಖ್ಯಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಿಸಿಬಿಯ ಸಂಘಟಿತ ಅಪರಾಧ ದಳದ(ಓಸಿಡ್ಲ್ಯೂ)ಸಬ್ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ ಅವರನ್ನು ಅಮಾನತ್ತುಗೊಳಿಸಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್  ಆದೇಶ ಹೊರಡಿಸಿದ್ದಾರೆ.

ತಿಂಗಳಿಗೆ ಅಧಿಕ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಸುಮಾರು 65 ಕೋಟಿ ಹೂಡಿಕೆ ಮಾಡಿಸಿಕೊಂಡಿದ್ದ ಜಯನಗರದಲ್ಲಿ ಕಚೇರಿ ಹೊಂದಿದ್ದ ಎಐಎಂಎಂಎಸ್ ಕಂಪನಿ ಸಾವಿರಾರು ಮಂದಿಗೆ ವಂಚನೆ ನಡೆಸಿತ್ತು.
ಸಂಬಂಧ ಬಂದ ದೂರುಗಳಿಂದ ಮಾಹಿತಿ ಪಡೆದು ವಿಚಾರಣೆ ನೆಪದಲ್ಲಿ ಎಐಎಂಎಂಎಸ್ ಕಂಪನಿಯವರ ಬಳಿ ಸಬ್ ಇನ್ಸ್ಪೆಕ್ಟರ್ ಪ್ರಕಾಶ್, ಮುಖ್ಯಪೇದೆ ಸತೀಶ್ 1 ಕೋಟಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ 35 ಲಕ್ಷ ಹಣ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸತ್ಯಾ ಸತ್ಯತೆ ಪರಿಶೀಲಿಸಿದ ಡಿಸಿಪಿ ಗಿರೀಶ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಾಬೀತಾಗಿದ್ದರಿಂದ  ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಇಬ್ಬರನ್ನ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments