Webdunia - Bharat's app for daily news and videos

Install App

ಟ್ರಾನ್ಸ್ ಜೆಂಡರ್ ಬಿಲ್ ‌‌ ಹಿಂಪಡೆಯಲು ಮಂಗಳಮುಖಿಯರ ಆಗ್ರಹ

Webdunia
ಮಂಗಳವಾರ, 1 ಜನವರಿ 2019 (16:00 IST)
ಟ್ರಾನ್ಸ್ ಜೆಂಡರ್ ಬಿಲ್ ನ್ನು‌‌ ಹಿಂಪಡೆಯುವಂತೆ ಒತ್ತಾಯಿಸಿ ಮಂಗಳಮುಖಿಯರು ‌ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿ ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಂಗಳಮುಖಿಯರು ಕೇಂದ್ರ  ಸರಕಾರದ ವಿರುದ್ಧ ಘೋಷಣೆ ಕೂಗಿ‌ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಟ್ರಾನ್ಸ್ ಜೆಂಡರ್ ಬಿಲ್‌ ನ್ನು 27 ತಿದ್ದುಪಡಿ ಸಮೇತ ಅನುಮೋದನೆ ನೀಡಲಾಗಿದೆ. ಈ ಬಿಲ್ ಮಾನವ ಕಳ್ಳ ಸಾಗಾಣೆ ಸೇರಿದಂತೆ ಹಲವು ನಿಬಂಧನೆಗೆ ಒಳಪಟ್ಟಿದ್ದು, ಭಾರತದ ಸಂವಿಧಾನ ಸಿದ್ದಾಂತಕ್ಕೆ ವಿರುದ್ಧವಾಗಿದೆ. ಈಗಾಗಲೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 379 ಹಾಗೂ 370 ಎ ಅಡಿಯಲ್ಲಿ ಮಾನವ ಕಳ್ಳಸಾಗಾಣೆ ಹಾಗೂ ಲೈಂಗಿಕ ದುರ್ಬಳಕೆ  ಮಾಡಿಕೊಳ್ಳುವದಕ್ಕೆ ಶಿಕ್ಷೆ ಇದ್ದು ಈ ಬಿಲ್ ಅನಾವಶ್ಯಕವಾಗಿದೆ. 

ಹೀಗಾಗಿ ಟ್ರಾನ್ಸ್ ಜೆಂಡರ್ ವ್ಯಕ್ತಿಗಳ ಬಿಲ್ 2018 ನ್ನು ಮತ್ತೊಮ್ಮೆ ಕೂಲಂಕುಶವಾಗಿ ಪರಿಶೀಲಿಸಿ ಸುಪ್ರೀಂಕೋರ್ಟ್ ತೀರ್ಪಿಗೆ ಪೂರಕವಾಗಿ ಹಾಗೂ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಟ್ರಾನ್ಸ್ ಜೆಂಡರ್ ಸಮುದಾಯವು ನೀಡಿರುವ ಅಭಿಪ್ರಾಯ ಒಳಗೊಂಡಿರುವಂತೆ ಮತ್ತೊಮ್ಮೆ ಟ್ರಾನ್ಸ್ ಬಿಲ್ ನ್ನು ಮಂಡಿಸಬೇಕು ಎಂದು ಒತ್ತಾಯಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ