Webdunia - Bharat's app for daily news and videos

Install App

ಪೊಲೀಸರೆಂದು ಹೇಳಿ ಯುವತಿಯರಿಗೆ ಲೈಂಗಿಕ ಸುಖದ ಬೇಡಿಕೆ ಇಟ್ಟ ಭೂಪರು

Webdunia
ಶುಕ್ರವಾರ, 6 ಸೆಪ್ಟಂಬರ್ 2019 (16:05 IST)
ಪೊಲೀಸ್ ಅಂತ ಹೇಳಿರೋ ಖದೀಮರಿಬ್ಬರು ಪಾರ್ಕಿನಲ್ಲಿ ಕುಳಿತಿದ್ದ ಯುವತಿಯನ್ನ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿರೋ ಘಟನೆ ನಡೆದಿದೆ.

ಪೊಲೀಸರೆಂದು ಹೇಳಿಕೊಂಡು ಯುವತಿಯೊಬ್ಬಳನ್ನು ಹೆದರಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಇಬ್ಬರು ಕಾಮುಕರನ್ನು ಮಹಿಳಾ ಠಾಣೆ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ಯುವತಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಇಬ್ಬರು ಆರೋಪಿಗಳು ಅಂದರ್ ಆಗಿದ್ದಾರೆ.

ದಾವಣಗೆರೆ ​ನಗರದ ನಿಟ್ಟುವಳ್ಳಿಯ ಮಲ್ಲಿಕಾರ್ಜುನ್, ದಾವಣಗೆರೆ ತಾಲೂಕಿನ ಹದಡಿ ಗ್ರಾಮದ ಕೆ. ಎನ್. ಸುರೇಶ್ ಬಂಧಿತರು. ಈ ಆರೋಪಿಗಳನ್ನು ನಗರದ ಎಸ್.ವಿ.ಎಸ್. ಕಾನ್ವೆಂಟ್ ಬಳಿ ಬಂಧಿಸಲಾಗಿದೆ.

ಆಗಸ್ಟ್ 23 ರಂದು ದಾವಣಗೆರೆಯ ತುಂಗಾಭದ್ರಾ ಬಡಾವಣೆಯ ಮುಂಭಾಗದಲ್ಲಿರುವ ದೈವಿಕ್ ಮೋತಿ ಪಿ. ರಾಮರಾವ್ ನಗರದಲ್ಲಿ ಹರಪನಹಳ್ಳಿ ಮೂಲದ ಯುವತಿ ತನ್ನ ಸ್ನೇಹಿತೆ ಜೊತೆ ಕುಳಿತಿದ್ದಳು.

ಈ ವೇಳೆ ಪೊಲೀಸರೆಂದು ಹೇಳಿಕೊಂಡು ಬಂದ ಮಲ್ಲಿಕಾರ್ಜುನ್ ಹಾಗೂ ಸುರೇಶ್ ಯುವತಿಯರನ್ನು ಠಾಣೆಗೆ ಕರೆದೊಯ್ಯುವುದಾಗಿ ಹೇಳಿಕೊಂಡು ಬೇರೆಡೆಗೆ ಕರೆದೊಯ್ದಿದ್ದರು. ಈ ವೇಳೆ ಆ ಇಬ್ಬರು ಯುವತಿಯರನ್ನು ಬೇರೆ ಬೇರೆ ಮಾಡಿ ನಾಗನೂರಿನ ಬಿಸ್ಲೇರಿಗೆ ಹೋಗುವ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಗೆ ಹೆದರಿಸಿ ಲೈಂಗಿಕವಾಗಿ ಸಹಕರಿಸುವಂತೆ ಆರೋಪಿಗಳು ಪೀಡಿಸಿದ್ದರಂತೆ. ಅಲ್ಲದೇ, ಯುವತಿಯ ಸಂಬಂಧಿಗೆ ಕರೆ ಮಾಡಿ, ಆಕೆಯ ಸ್ನೇಹಿತೆಯನ್ನು ಬಿಡಲು 20 ಸಾವಿರ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಬಳಿಕ ಯುವತಿ ಮೊಬೈಲ್ ಕಸಿದುಕೊಂಡು ಹೋಗಿದ್ದರು.

ಈ ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ರಾಜೀವ್​, ನಗರ ಉಪವಿಭಾಗದ ಪ್ರಭಾರ ಸಬ್​ ಇನ್​ಸ್ಪೆಕ್ಟರ್ ಮಂಜುನಾಥ್ ಗಂಗಲ್ ಮಾರ್ಗದರ್ಶನದಲ್ಲಿ ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕಿ ನಾಗಮ್ಮ ಮತ್ತವರ ಸಿಬ್ಬಂದಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ