Webdunia - Bharat's app for daily news and videos

Install App

ಸಿಎಂ ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್ ಧ್ವಂಸ

Webdunia
ಗುರುವಾರ, 7 ಸೆಪ್ಟಂಬರ್ 2017 (10:53 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವ ಹಿನ್ನೆಲೆಯಲ್ಲಿ ವಿಐಪಿಗಳ ವಾಹನ ನಿಲುಗಡೆಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವುದರಿಂದ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನೂರಾರು ಬೆಂಬಲಿಗರ ವಾಹನಗಳು ಆಗಮಿಸುತ್ತಿರುವುದರಿಂದ ಪಾರ್ಕಿಂಗ್‌ಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕೇವಲ ಒಂದು ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಿರುವುದು ಜನತೆಯಲ್ಲಿ ಆಕ್ರೋಶ ಮೂಡಿಸಿದೆ. ಅಧಿಕಾರಿಗಳು ಕಾಲೇಜು ಕಂಪೌಂಡ್ ಒಡೆಯಲು ಕಾಲೇಜಿನ ಅಡಳಿತ ಮಂಡಳಿಯ ಅನುಮತಿ ಪಡೆದಿದ್ದರೆ? ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ನಂತರ ಕಾಲೇಜು ಕಂಪೌಂಡ್ ಗೋಡೆಯನ್ನು ಕಟ್ಟಿಸಿಕೊಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಜನರು ಜಿಲ್ಲೆಯ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments