ರಾಮಾಯಣ ಕುರಿತಾದ ನಾಟಕ ಪ್ರದರ್ಶನ ವೇಳೆ ಜೀವಂತ ಹಂದಿಯನ್ನು ಕೊಂದು ಸೇವಿಸಿದ ರಾಕ್ಷಸ ಪಾತ್ರದಾರಿ

Sampriya
ಮಂಗಳವಾರ, 3 ಡಿಸೆಂಬರ್ 2024 (17:27 IST)
Photo Courtesy X
ಒಡಿಶಾ: ರಾಮಾಯಣ ಕುರಿತಾದ ನಾಟಕ ಪ್ರದರ್ಶನದ ವೇಳೆ ರಾಕ್ಷಸ ಪಾತ್ರದಾರಿಯೊಬ್ಬ ವೇದಿಕೆಯಲ್ಲಿಯೇ ಜೀವಂತ ಹಂದಿಯನ್ನು ಕೊಂದು ಅದರ ಹೊಟ್ಟೆಯನ್ನು ಸೀಳಿ ಹಸಿ ಮಾಂಸವನ್ನು ತಿಂದಿರುವ ಘಟನೆ ಒಡಿಶಾದ ಬಹರಾಂ‍ಪುರ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ನವೆಂಬರ್ 24ರಂದು ಬಹರಾಂ‍ಪುರದ ಹಿಂಜಿ ಪೊಲೀಸ್ ಠಾಣೆಯ ರಾಲಾಬ್ ಎಂಬ ಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ರಾಕ್ಷಸ ಪಾತ್ರ ಮಾಡಿದ ಭೀಮಾಂಧರ್ ಗೌಡಾ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಲಾಬ್ ಹಳ್ಳಿಯ ಗ್ರಾಮಸ್ಥರು ಕಂಜೈನಾಲ್ ಯಾತ್ರಾ ಪ್ರಯುಕ್ತ ಗ್ರಾಮದಲ್ಲಿ ರಾಮಾಯಣಕ್ಕೆ ಸಂಬಂಧಿಸಿದ ನಾಟಕ ಆಯೋಜಿಸಿದ್ದರು. ಈ ವೇಳೆ ರಾಕ್ಷಸ ಪಾತ್ರಧಾರಿ ಭೀಮಾಂಧರ್ ಗೌಡಾ ಹಾಗೂ ಆತನ ಕೆಲ ಸಹಚರರು ಸಭಿಕರ ಮನ ಸೆಳೆಯುವ ಉದ್ದೇಶದಿಂದ ಕತ್ತಿಯಿಂದ ಹಂದಿಯನ್ನು ಕೊಂದು ಕ್ರೌರ್ಯ ಮೆರೆದಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ಜೀವಂತ ಹಾವುಗಳನ್ನು ಪ್ರದರ್ಶಿಸಿ ಅನೇಕರಿಗೆ ಭಯ ಹುಟ್ಟಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments