Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ಬಂಧನಕ್ಕೆ ಖಂಡನೆ

Webdunia
ಗುರುವಾರ, 30 ಆಗಸ್ಟ್ 2018 (17:34 IST)
ಭೀಮಾ ಕೋರೆಗಾವ್ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ನೆಪವೊಡ್ಡಿ ಮಹಾರಾಷ್ಟ್ರ ಪೊಲೀಸರು ಹಿರಿಯ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ದಾಳಿ ನಡೆಸಿ ಬಂಧನ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ದೇಶದ ವಿವಿಧ  ಭಾಗಳಲ್ಲಿ 28 ಆಗಸ್ಟ್ 2018ರಂದು ನಡೆದ ಹಿರಿಯ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲಿನ ದಾಳಿ ಮತ್ತು ಬಂಧನವನ್ನು ಎಸ್ ಯು ಸಿಐ (ಸಿ) ಖಂಡಿಸಿದೆ.

ಕಲಬುರಗಿಯಲ್ಲಿ ಮಾತನಾಡಿರುವ ಎಸ್‍ಯುಸಿಐ(ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ವ್ಹಿ. ದಿವಾಕರ್ ,  ಭೀಮಾ-ಕೊರೆಗಾವ್ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ನೆಪವೊಡ್ಡಿ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ. ಮಹಾರಾಷ್ಟ್ರದ  ಪೊಲೀಸ್ ಹಾಗೂ ಆಡಳಿತ ವರ್ಗವು ಹಿರಿಯ ಮಾನವ ಹಕ್ಕುಗಳ ಹಾಗು ಸಾಮಾಜಿಕ ಕಾರ್ಯರ್ತರ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದು ಪ್ರಜಾತಾಂತ್ರಿಕ ವ್ಯವಸ್ಥೆಗೆ ವಿರುದ್ಧವಾಗಿದೆ.


ಪ್ರತಿರೋಧದ ಧ್ವನಿಯನ್ನು ಹತ್ತಿಕ್ಕಲು, ಹೋರಾಟನಿರತ ಜನರ ಮನದಲ್ಲಿ ಭಯದ ವಾತಾವರಣವನ್ನು ನಿರ್ಮಿಸಲು ಹೊರಟಿರುವ ಬಿಜೆಪಿಯ ಈ ಫ್ಯಾಸಿಸ್ಟಿಕ್ ನಡೆ ಅತ್ಯಂತ ಖಂಡನಾರ್ಹ. ಈ ಕೂಡಲೇ ಯಾವುದೇ ಶರತ್ತುಗಳಿಲ್ಲದೆ ಬಂಧಿಸಿರುವ ಎಲ್ಲಾ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕೆಂದು  ಎಸ್ ಯು ಸಿಐ(ಸಿ) ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments