Webdunia - Bharat's app for daily news and videos

Install App

ಶಾಪಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ

Webdunia
ಬುಧವಾರ, 30 ಜುಲೈ 2014 (15:29 IST)
ಶಾಪಿಂಗ್‌ಗೆ ಕರೆದೊಯ್ಯಲು ನಿರಾಕರಿಸಿದ್ದಕ್ಕಾಗಿ, ಮನನೊಂದ 19 ವರ್ಷದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮುಂದಿನ ತಿಂಗಳು ಆಕೆಯ ಮದುವೆ ನಿಶ್ಚಯವಾಗಿತ್ತು. 

ಸಿರಿನ್ ಸಾಬು ಎಂಬಾಕೆಯೇ ಈ ದುಷ್ಕೃತ್ಯಕ್ಕೆ ಕೈ ಹಾಕಿದ ಯುವತಿಯಾಗಿದ್ದು ಆಕೆ ಪೇಟಿಂಗ್ ಗುತ್ತಿಗೆದಾರ ಸಯ್ಯದ್ ಅಬ್ದುಲ್ ಎಂಬುವವರ ಮಗಳಾಗಿದ್ದಾಳೆ. 
 
ಬಾಣಸ್ವಾಡಿಯ ರಾಮಸ್ವಾಮಿಪಾಳ್ಯದಲ್ಲಿ  ನಡೆದ ಘಟನೆಯಲ್ಲಿ ಕಳೆದ ಸೋಮವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಆಕೆಯ ಮದುವೆ ನಿಶ್ಚಯವಾಗಿತ್ತು. 
 
ಆಕೆಯ ತಾಯಿ ಮನೆಗೆ ಹಿಂತಿರುಗಿದಾಗ ಮಗಳು ಫ್ಯಾನ್‌ಲ್ಲಿ ನೇತಾಡುತ್ತಿರುವುದನ್ನು ನೋಡಿದ್ದಾಳೆ.  ಮರಣಪತ್ರವೇನೂ ದೊರೆತಿಲ್ಲ. ಆಕೆ ತನ್ನ ಮದುವೆಯ ಸಿದ್ಧತೆಗಾಗಿ ಶಾಪಿಂಗ್‌ಗೆ ಹೋಗಲು ನಿರ್ಧರಿಸಿದ್ದಳು. ಆದರೆ ಎರಡು ದಿನಗಳ ನಂತರ ಹೋಗೋಣವೆಂದು ಆಕೆಯ ತಂದೆ ಹೇಳಿದ್ದರು ಮತ್ತು ಈದ್ ಹಬ್ಬಕ್ಕೆ ಅವಳಿಗೆ ಕಳಪೆ ದರ್ಜೆಯ ಬಟ್ಟೆಗಳನ್ನು ತರಲಾಗಿತ್ತು. ಈ ಕ್ಷುಲ್ಲಕ ಕಾರಣಕ್ಕೆ ಖಿನ್ನಳಾಗಿದ್ದ ಆಕೆ ಸಾಯುವಂತ ದುಡುಕಿನ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ ಎಂದು ಪೋಲಿಸರು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments