ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಎಸ್ವೈ ವಿರುದ್ಧ ಹಲವು ಡಿನೋಟಿಫಿಕೇಶನ್ ಕೇಸ್ಗಳು ಇದ್ದವು. ಸಿರಾಜಿನ್ ಬಾಷಾ ಯಡಿಯೂರಪ್ಪನವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಖಾಸಗಿ ದೂರುಗಳನ್ನು ಸಲ್ಲಿಸಿದ್ದರು.
ಈ ಕುರಿತು ತನಿಖೆ ಮಾಡುವಂತೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಕುರಿತು ನೀಡಿದ್ದ ನೀಡಿದ್ದ ಅನುಮತಿ ರದ್ದುಮಾಡಿದೆ. ಹೈಕೋರ್ಟ್ ವಿಭಾಗೀಯ ಪೀಠ ಯಡಿಯೂರಪ್ಪನವರ ಮೇಲಿದ್ದ ಡೀ ನೋಟಿಫಿಕೇಶನ್ ಕೇಸ್ಗಳನ್ನು ರದ್ದು ಮಾಡಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮುಖರ್ಜಿ ಈ ಕುರಿತು ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಧಾನ ಸರಿಯಿಲ್ಲವೆಂದು ತೀರ್ಮಾನಿಸಿದ ಕೋರ್ಟ್ ರಾಜ್ಯಪಾಲರಿಗೆ ಕೇಸನ್ನು ಮರಳಿಸಿದೆ. ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜರು ಸಚಿವ ಸಂಪುಟದ ಅನುಮತಿ ಪಡೆಯದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು.