Webdunia - Bharat's app for daily news and videos

Install App

ವೃತ್ತಿ ಕಿರುಕುಳವೇ ಆತ್ಮಹತ್ಯೆಗೆ ಕಾರಣ:ಸಿಐಡಿಯಿಂದ ಸ್ಫೋಟಕ ವರದಿ

Webdunia
ಶುಕ್ರವಾರ, 15 ಜುಲೈ 2016 (18:16 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ವೃತ್ತಿ ಕಿರುಕುಳ ಕಾರಣವೇ ಹೊರತು ಕೌಟುಂಬಿಕ ಕಲಹವಲ್ಲ ಎಂದು ಸಿಐಡಿ ಅಧಿಕಾರಿಗಳು ಸ್ಫೋಟಕ ವರದಿಯನ್ನು ನೀಡಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದು, ಸಾಕಷ್ಟು ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.
 
ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮಾಧ್ಯಮ ಸಂದರ್ಶನದಲ್ಲಿ ಆರೋಪಿಸಿರುವುದು ಎಲ್ಲವು ಸತ್ಯ.  ಸ್ಥಳೀಯ ಪೊಲೀಸ್ ಅಧಿಕಾರಿಯಾಗಿರುವ ಸಿಪಿಐ ಮಾದಪ್ಪ ಆತ್ಮಹತ್ಯೆ ಪ್ರಕರಣವನ್ನು ತಿರುಚಲು ಯತ್ನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
 
ಜುಲೈ 5 ರ ಸಂಜೆ 7 ಗಂಟೆಗೆ ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿರುವ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆದರೆ, ಪೊಲೀಸರು ಗಣಪತಿ ಪತ್ನಿ ಪಾವನಾ ಅವರಿಗೆ ಮಾಹಿತಿ ನೀಡಿರಲಿಲ್ಲ. ಜೊತೆಗೆ ರಾತ್ರಿ 8 ಗಂಟೆಯವರೆಗೂ ಕೇಸ್ ದಾಖಲಿಸಿಕೊಳ್ಳದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುಂಚೆ ಅವರ ಸಹೋದರ ಡಿವೈಎಸ್‌ಪಿ ತಮ್ಮಯ್ಯ ಅವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸಂದೇಶ ರವಾನಿಸಿದ್ದರು. ಆದರೆ, ತಮ್ಮಯ್ಯ ತಡವಾಗಿ ಸಂದೇಶವನ್ನು ನೋಡಿರುತ್ತಾರೆ. ಅಷ್ಟೋತ್ತಿಗೆ ಮಾಧ್ಯಮದಲ್ಲಿ ಗಣಪತಿ ನೀಡಿರುವ ಸಂದರ್ಶನ ಪ್ರಸಾರವಾಗುತ್ತಿತ್ತು. ನಂತರ ತಮ್ಮಯ್ಯನವರು ಟವರ್ ಲೋಕೆಶನ್ ಪತ್ತೆ ಮಾಡಲು ಪೊಲೀಸರಿಗೆ ಸೂಚನೆ ನೀಡುತ್ತಾರೆ. ಆವಾಗ, ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಸಿಐಡಿ ಅಧಿಕಾರಿಗಳು ವರದಿ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments