Webdunia - Bharat's app for daily news and videos

Install App

ಜನರ ಸಮಸ್ಯೆ ಆಲಿಸಲು ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ಓಪನ್ ಮಾಡಿದ ಗೃಹ ಇಲಾಖೆ

Webdunia
ಬುಧವಾರ, 3 ಜುಲೈ 2019 (09:40 IST)
ಬೆಂಗಳೂರು : ಜನರು ತಮ್ಮ ಸಮಸ್ಯೆಯನ್ನು ಮುಕ್ತವಾಗಿ ತಿಳಿಸುವ ಸಲುವಾಗಿ ದೇಶದಲ್ಲಿ ಇದೇ ಮೊದಲ ಬಾರಿಗೆ ಗೃಹ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ಓಪನ್ ಮಾಡಿದೆ.



ಜನರು ತಮ್ಮ ಸುತ್ತ ನಡೆಯುತ್ತಿರುವ ಅಕ್ರಮ ಚಟುವಟಿಕೆ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಸಮಸ್ಯೆ ಬಗ್ಗೆ ಪೊಲೀಸ್​ ಠಾಣೆಗೆ ಬಂದು ದೂರು ನೀಡಲು ಹಿಂಜರಿಯುತ್ತಿರುವ ಕಾರಣ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ಟ್ವಿಟರ್, ಶೇರ್​ಚಾಟ್​ನಲ್ಲಿ ಗೃಹ ಇಲಾಖೆ ಖಾತೆ ತೆರೆದಿದ್ದು, ಜನರು ಇಲ್ಲಿ ಮುಕ್ತವಾಗಿ ದೂರು ನೀಡಲು ಅವಕಾಶ ಮಾಡಿಕೊಟ್ಟಿದೆ.


ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಇಂತಹ ಒಂದು ನೂತನ ಪ್ರಯತ್ನವನ್ನು ಆರಂಭಿಸಿದ್ದು, ಇದರಲ್ಲಿ ಜನರ ಸಮಸ್ಯೆಗಳನ್ನು ಆಲಿಸುವುದು ಮಾತ್ರವಲ್ಲ ಅಧಿಕಾರಿಗಳು ಸಮಸ್ಯೆಗೆ ಪರಿಹಾರವನ್ನು ಕೂಡ ಸೂಚಿಸಲಿದ್ದಾರಂತೆ. ಅಲ್ಲದೇ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ನಡೆದ ಜನಪರ ಚಟುವಟಿಕಗೆಳು, ಅಪರಾಧ, ಸಂಚಾರ ದಟ್ಟಣೆ ತಡೆಗಟ್ಟಲು ಕೈಗೊಂಡ ಕ್ರಮಗಳನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಜನರಿಗೆ ಗೃಹ ಇಲಾಖೆ ಮಾಹಿತಿ ಒದಗಿಸಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments