Publish Date: Tue, 31 Jan 2023 (11:40 IST)
Updated Date: Tue, 31 Jan 2023 (11:55 IST)
ಮಂಗಳೂರು : ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ ಯಾಕೆ ಕೊಲೆಯಾಗಬೇಕು ಕೊಲೆಯಾಗಬೇಕೆಂದು ಬಿಜೆಪಿ ಯವರು ಕಾಯುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ಪ್ರಾಣ ಕಳಕೊಂಡವರ ಕುಟುಂಬದ ಅಕ್ಕ-ತಂಗಿಯರ ನೋವು ಇವರಿಗೆ ಅರ್ಥ ಆಗುತ್ತದೆಯೇ?. ಚುನಾವಣೆಗೋಸ್ಕರ, ಮಾಧ್ಯಮದಲ್ಲಿ ಬಿಲ್ಡಪ್ ಸಿಗತ್ತೆ ಅಂತ ಹೇಳಿಕೆ ಕೊಡುತ್ತಾರೆ. ಇವರ ಹೇಳಿಕೆಯಿಂದ ಜನರಲ್ಲಿ ಭಯ ಶುರುವಾಗಿದೆ.