Webdunia - Bharat's app for daily news and videos

Install App

ಡಿಪೋ ಮ್ಯಾನೇಜರ್ ಕಿರುಕುಳ -ನೌಕರನ ಶವವಿಟ್ಟು ಪತ್ನಿಯಿಂದ ಪ್ರತಿಭಟನೆ

Webdunia
ಮಂಗಳವಾರ, 30 ಆಗಸ್ಟ್ 2022 (21:06 IST)
ಆರ್ ಆರ್ ನಗರ ಬಿಎಂಟಿಸಿ ಡಿಪೋ ಮುಂದೆ ಬಿಎಂಟಿಸಿ ನೌಕರ ಹೊಳೆಬಸಪ್ಪ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತ ಹೊಳೆಬಸಪ್ಪ ಹೆಂಡತಿ ಇಬ್ಬರು ಮಕ್ಕಳೊಂದಿಗೆ ಧರಣಿ ನಡೆಸುತ್ತಿದ್ದು ಕೆಆರ್ಎಸ್ ಪಾರ್ಟಿ ಮತ್ತು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆಗೆ ಸಾಥ್ ಕೊಟ್ಟಿದ್ದಾರೆ. ನೂರಾರು ಸಂಖ್ಯೆಯಲ್ಲಿ ನೌಕರರು ಜಮಾಯಿಸಿ ಸ್ಥಳಕ್ಕೆ ಸಾರಿಗೆ ಸಚಿವರು ಬರುವಂತೆ ಪಟ್ಟು ಹಿಡಿದಿದ್ದಾರೆ. ಹಾಗೂ ಡಿಪೋ ಮ್ಯಾನೇಜರ್ ಮಲ್ಲಿಕಾರ್ಜುನಯ್ಯ ಬಂಧಿಸಬೇಕು ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಬಿಎಂಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ್ರು ಸ್ಥಳಕ್ಕೆ ಸಚಿವರು ಬಂದಿಲ್ಲ. ಒಬ್ಬ ನೌಕರ, ಅಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೌಜನಕ್ಕೂ ಸಾರಿಗೆ ಸಚಿವ ಶ್ರೀ ರಾಮುಲು, ಬಿಎಂಟಿಸಿ ಎಂಡಿ ಜಿ. ಸತ್ಯವತಿ ಹಾಗೂ ನಂದೀಶ್ ರೆಡ್ಡಿ ಭೇಟಿ ನೀಡಿಲ್ಲ. ಸಾವಿಗೆ ಕಾರಣನಾದ ಡಿಪೋ ಮ್ಯಾನೇಜರ್ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಆತನಿಗೆ ಪಕ್ಕದ ಡಿಪೋ ಗೆ ಶಿಫ್ಟ್ ಮಾಡಿ ಸೇಫ್ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments