Select Your Language

Notifications

webdunia
webdunia
webdunia
webdunia

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Mohammad Nalapad
Photo Credit X
ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. 

ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿ, ಆಗಸ್ಟ್ 1ರಂದು ಖುದ್ದಾಗಿ ಕೋರ್ಟ್‌ಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಸೂಚಿಸಿದೆ. 

ಏನಿದು ಪ್ರಕರಣ: 
ಆರ್‌ಎಸ್ಎಸ್ ಕಾರ್ಯಕರ್ತ, ಬೆಂಗಳೂರಿನ ಸಿದ್ದಾಪುರದ ತೇಜಸ್ ಗೌಡ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. 2025ರ
ಅಕ್ಬೋಬರ್ 14 ರಂದು ಪ್ರಿಯಾಂಕ್ ಖರ್ಗೆ ತಮ್ಮ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್ ವಿರುದ್ದ ಪೋಸ್ಟ್ ಹಾಕಿದ್ದರು. ಅತ್ತ ಮೊಹಮ್ಮದ್ ನಲಪಾಡ್ ಯೂಟ್ಯೂಬ್ ಚಾನಲ್ ಒಂದರಲ್ಲಿ ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಂಬಂಧ ದೂರು ನೀಡಲಾಗಿತ್ತು. ಈ ಇಬ್ಬರ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. 

ಈ ಹಿಂದೆಯೂ ಕೋರ್ಟ್ ಇಬ್ಬರಿಗೂ ಸಮನ್ಸ್ ಜಾರಿ ಮಾಡಿತ್ತು. ಇದೀಗ ಸಮನ್ಸ್ ಜಾರಿ ಬಗ್ಗೆ ಪೊಲೀಸರ ಮಾಹಿತಿ ಒಪ್ಪದ ಕೋರ್ಟ್, ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ ಮಾಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ