Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ: ಸೋಮಣ್ಣ

ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ: ಸೋಮಣ್ಣ
ಮೈಸೂರು , ಶುಕ್ರವಾರ, 5 ಮೇ 2023 (09:26 IST)
ಮೈಸೂರು: ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಕರೆಸಿಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಸಚಿವ ವಿ. ಸೋಮಣ್ಣ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಪರ ಸ್ಟಾರ್ಗಳ ಪ್ರಚಾರ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ ಈಗ ಮತ್ತೆ ಮತ್ತೆ ಬರ್ತಿದ್ದಾರೆ. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ಗಳನ್ನು ಕರೆಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ.

ರಾಜಕುಮಾರ್ ಕುಟುಂಬಕ್ಕೂ ನನಗೂ 40 ವರ್ಷದ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿಸಿದ್ದೇನೆ ಎಂದರು.

ಶಿವರಾಜ್ ಯಾಕೆ ಹೀಂಗೆ ಮಾಡಿದರು ನನಗೆ ಗೊತ್ತಿಲ್ಲ. ನನಗೆ ವಿಜಿ, ರಮ್ಯಾ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕ್ಕೆ ಜೊತೆ ಬಂದು ಸೋಮಣ್ಣ ವಿರುದ್ಧ ಪ್ರಚಾರ ಮಾಡ್ತಿದ್ದಾರಲ್ಲ ನನಗೆ ಅದೇ ಖುಷಿ. ಜನ ಸೇರಿಸಲು ಸಿದ್ದರಾಮಯ್ಯ ಸ್ಟಾರ್ಗಳ ಜೊತೆ ಬರುತ್ತಿದ್ದಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸಿ: ಸರ್ಕಾರ ಆದೇಶ