Webdunia - Bharat's app for daily news and videos

Install App

ಕಾಡಾನೆಗಳ ದಾಳಿಯಿಂದ ಬೆಳೆಗಳು ನಾಶ; ಪರಿಹಾರ ಕೋರಿ ವಿಡಿಯೋ ಮೂಲಕ ಸಿಎಂಗೆ ಮನವಿ ಮಾಡಿದ ಬಾಲಕಿ

Webdunia
ಗುರುವಾರ, 22 ನವೆಂಬರ್ 2018 (13:06 IST)
ಹಾಸನ : ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ದಾಳಿಯಿಂದ ಬೆಳೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಇದೀಗ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಾಲಕಿ ಸಿಎಂ ಕುಮಾರಸ್ವಾಮಿಯವರಿಗೆ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾಳೆ.


ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಸುತ್ತಮುತ್ತ ಆನೆಗಳ ಹಿಂಡು ಬೀಡುಬಿಟ್ಟಿದೆ. ಅಲ್ಲದೇ ಒಂಟಿಸಲಗವೊಂದು ಹಾಡಹಗಲೇ ಭತ್ತದಗದ್ದೆಯಲ್ಲಿ ಓಡಾಟ ನಡೆಸಿದೆ. ಇದರಿಂದ ಕಾಫಿ, ಭತ್ತ ಸೇರಿದಂತೆ ಇತರೆ ಬೆಳೆಗಳ ನಷ್ಟದೊಂದಿಗೆ ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ.


ಈ ಘಟನೆಯಿಂದ ಬೆಸತ್ತಿರುವ ಹೊಸಗದ್ದೆ ಗ್ರಾಮದ ವಿಸ್ಮಯ ಎಂಬ ಬಾಲಕಿಯು , ಕುಮಾಸ್ವಾಮಿ ಅವರ ಕುರಿತು, “ನಮಸ್ತೆ. ನನ್ನ ಹೆಸರು ವಿಸ್ಮಯ. ನಾನು ಹೊಸಗದ್ದೆ ಗ್ರಾಮದ ನಿವಾಸಿ. ಆನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳ ದಾಳಿಯಿಂದಾಗಿ ಸಕಲೇಶಪುರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಬೆಳೆ ನಷ್ಟವಾಗಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ಪರಿಹಾರ ಕೊಡಬೇಕೆಂದು ಕೇಳಿಕೊಳ್ಳುತ್ತೇನೆಂದು ವಿಡಿಯೋ ಮೂಲಕ ತಿಳಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments