ಮಗ್ಗುಲ ಗ್ರಾಮಕ್ಕೆ ನಿರಂತರ ಕಾಡಾನೆ ಧಾಳಿ ಬೆಳೆ ನಾಶಹತಾಶನಾದ ರೈತ

Webdunia
ಭಾನುವಾರ, 14 ನವೆಂಬರ್ 2021 (20:56 IST)
ರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮದಲ್ಲಿ ಭತ್ತದ ಬೆಳೆಗೆ ನಿರಂತರವಾಗಿ ಕಾಡಾನೆಗಳ ಹಿಂಡು ಧಾಳಿ ಮಾಡಿ ಕಟಾವಿನ ಸಮೀಪದಲ್ಲಿರುವ ಬೆಳೆಯನ್ನು ನಾಶಮಾಡಿದ ಪರಿಣಾಮ ರೈತರು ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಹತಾಶನಾಗಿದ್ದಾನೆ.
ನೆನ್ನೆ ದಿನ ಗ್ರಾಮದ ಕೃಷಿಕರಾದ ಪುಲಿಯಂಡ ಜಗದೀಶ್ ಮತ್ತು ಅಯ್ಯಪ್ಪನವರ ಭತ್ತದ ಗದ್ದೆಗೆ ಧಾಳಿ ಮಾಡಿದ ಕಾಡಾನೆಗಳು ಇನ್ನೇನು  ಮುಂದಿನ ಹತ್ತು ದಿನಗಳಲ್ಲಿ ಕಟಾವು ಮಾಡಬೇಕಿದ್ದ ಬೆಳೆಯನ್ನು ನಾಶ ಮಾಡಿವೆ.ಎರಡು ತಿಂಗಳ ಹಿಂದೆ ಕೂಡ ಇಲ್ಲಿ ಕಾಡಾನೆಗಳು ದಾಳಿ ಮಾಡಿ ನಷ್ಟ ಮಾಡಿದ್ದವು.ಈಗ ಪುನಃ ಗದ್ದೆಯನ್ನು ತೊಯ್ದಾಡಿವೆ.ಹೀಗಾದರೆ ಭತ್ತದ ಕೃಷಿಯನ್ನು ಮಾಡುವುದು ಹೇಗೆ ಎಂಬ ಮೂಲಭೂತ ಪ್ರಶ್ನೆ ಎದುರಾಗಿದೆ ಎಂದು ಸುಮಾರು ಹತ್ತು ಏಕರೆ ಪ್ರದೇಶದಲ್ಲಿ ಭತ್ತ ಬೆಳೆದಿರುವ ಪುಲಿಯಂಡ ಜಗದೀಶ್ ಆತಂಕ ವ್ಯಕ್ತಪಡಿಸಿದ್ದಾರೆ.ಲಾಭ ನಷ್ಟಗಳ ಸಮತೋಲನದಲ್ಲಿ ಭತ್ತದ ಕೃಷಿ ಮಾಡುತ್ತಿದ್ದು  ಇನ್ನು ಮುಂದಕ್ಕೆ ಭತ್ತದ ಕೃಷಿಗೆ ಎಳ್ಳು ನೀರು ಬಿಡುವುದೊಂದೇ ಪರಿಹಾರ ಮಾರ್ಗ ಎಂದು ಮತ್ತೋರ್ವ ಕೃಷಿಕ ಪುಲಿಯಂಡ ಅಯ್ಯಪ್ಪ  ನೋವನ್ನು ತೋಡಿಕೊಂಡರು.
ಮಾಹಿತಿಯನ್ನು ಸ್ಥಳೀಯರು ವಲಯ ಅರಣ್ಯಾಧಿಕಾರಿ ದೇವಯ್ಯನವರಿಗೆ ತಿಳಿಸಿದ  ತಕ್ಷಣವೇ ದೌಡಾಯಿಸಿದ ಸಹಾಯಕ ವಲಯ ಅರಣ್ಯ ಅಧಿಕಾರಿ ಶ್ರೀಶೈಲ,ಚಂದ್ರಶೇಖರ್ ಸೇರಿದಂತೆ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.
ಗ್ರಾಮಸ್ಥರುಗಳಾದ ಕುಪ್ಪಚ್ಚಿರ ಮದನ್ ,ಸತೀಶ್ ಪುಲಿಯಂಡ ಡೆನ್ನಿ ಮತ್ತು ಡಾಲು ಸೇರಿದಂತೆ ಮತ್ತಿತರರು ಸ್ಥಳದಲ್ಲಿ ಮಾಹಿತಿ ಒದಗಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments