Publish Date: Sat, 07 May 2022 (19:53 IST)
Updated Date: Sat, 07 May 2022 (19:57 IST)
ದರೋಡೆಗೆ ಸಂಚು ರೂಪಿಸುತ್ತಿದ್ದ 5 ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್, ಪ್ರಕಾಶ್, ಹನುಮಂತ್, ಶ್ರೀಶೈಲ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು. ಇವರುಗಳು ಕಾಮಾಕ್ಷಿಪಾಳ್ಯ, ಜ್ಞಾನಭಾರತಿ, ಸುಬ್ರಮಣ್ಯಪುರ, ಅನ್ನಪೂರ್ಣೇಶ್ವರಿ ನಗರ ಸೇರಿದಂತೆ ನಗರದ ಇತರ ಕಡೆಗಳಲ್ಲಿ ಕಳವು ಹಾಗೂ ಚೈನ್ ಸ್ನ್ಯಾಚ್ ಮಾಡಿರುವುದು ಬೆಳಕಿಗೆ ಬಂದಿದೆ. ಮುಂದಿನ ದರೋಡೆಗೆ ಸಂಚುರೂಪಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳಿಂದ 8 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನಗಳು, 4 ಮೊಬೈಲ್ ಹಾಗೂ 20 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ.