Webdunia - Bharat's app for daily news and videos

Install App

ಗಮನ ಬೇರೆ ಕಡೆ ಸೆಳೆದು ಕಳ್ಳತನ: ಕುಖ್ಯಾತ ಕಳ್ಳರ ಬಂಧನ

Webdunia
ಬುಧವಾರ, 11 ಜುಲೈ 2018 (13:52 IST)
ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರಾಜ್ಯ ಕಳ್ಳರ ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ, ಸತ್ಯಮೂರ್ತಿ ಜ್ಞಾನವೇಲು, ಕುಮಾರೇಶನ್ ಸೇಲ್ವರಾಜ್, ಕೆ ಬಾರದಿರಾಜ್ ಕೇಶವನ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ 1 ಲಕ್ಷ 50 ಸಾವಿರ ಮೌಲ್ಯದ ಒಂದು ಲ್ಯಾಪ್ಟಾಪ್ 1 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ, ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಕಳ್ಳತನ ಮಾಡುತ್ತಿದ್ದರು.‌ ಜೂ. 3 ರಂದು ಕೊಪ್ಪಿಕರ್ ರಸ್ತೆಯ ಸೆಟಲೈಟ್ ಬಿಲ್ಡಿಂಗ್ ಎದುರಿನ‌ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸಾಜೀದ್ ಫರಾಶ್ ಎನ್ನುವರ ಕಾರಿನಲ್ಲಿನ 45 ಸಾವಿರ ಮೌಲ್ಯದ ಆಪಲ್ ಕಂಪನಿಯ ಲ್ಯಾಪಟಾಪ್ ಹಾಗೂ ಕಾಗದ ಪತ್ರಗಳನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಶಹರ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು. ಆರೋಪಿಗಳ ಹಿಂದೆ ಬಿದಿದ್ದ ಪೊಲೀಸರು.

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಓಡಿ ಹೋಗುವಾಗ ಕಳ್ಳನನ್ನು ಬೆನ್ನಹತ್ತಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಹರ ಪೊಲೀಸ ಇನ್ಸ್‌ಪೆಕ್ಟರ್ ಭರತ ಎಸ್ .ಆರ್. ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ ಸಿಬ್ಬಂದಿಗಳಾದ ಸದಾನಂದ ಕಲಘಟಗಿ, ಮಂಜು ಹಾಲವರ, ಶ್ರೀನಿವಾಸ ಯರಗುಪ್ಪಿ, ಚಂದ್ರಶೇಖರ್ ಆರೋಪಿಗಳ ಬಂಧನ‌ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments