Webdunia - Bharat's app for daily news and videos

Install App

ಉಡ, ಚಿಪ್ಪು ಹಂದಿ ಮಾರಾಟಗಾರರ ಬಂಧನ

Webdunia
ಶನಿವಾರ, 15 ಡಿಸೆಂಬರ್ 2018 (16:40 IST)
ಬಹು ಬೇಡಿಕೆಯ ಉಡ ಹಾಗೂ ಚಿಪ್ಪು ಹಂದಿಯ ಬಿಡಿ ಭಾಗಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಆರ್ ಎಫ್ ಓ ಶಿಲ್ಪಾ ಗ್ರಾಹಕರ ಸೋಗಿನಲ್ಲಿ ದಾಳಿ ಮಾಡಿ ಇಬ್ಬರು ಚಿಪ್ಪು ಹಂದಿ ಬಿಡಿ ಭಾಗ ಮತ್ತು ಉಡ ಪ್ರಾಣಿಯ ಗುಪ್ತಾಂಗ ಭಾಗಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾಗ ದಾಳಿ ಮಾಡಿ ಬಂಧಿಸಿದ್ದಾರೆ.

ಯಾದಗಿರಿ ಜಿಲ್ಲೆ ಶಹಪುರ ಮೂಲದ ರಾಮು ಹಾಗೂ ವೆಂಕಟೇಶ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಹತ್ತಾರು ಉಡದ ಗುಪ್ತಾಂಗ ಭಾಗ, ಮೂರು ಚಿಪ್ಪು ಹಂದಿ ಬಿಡಿ ಭಾಗವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಉಡ ಪ್ರಾಣಿಯ ಗುಪ್ತಾಂಗ ಭಾಗಕ್ಕೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಮಾಟ, ಮಂತ್ರ ಹಾಗೂ ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳೋಕೆ ಈ ಭಾಗಗಳನ್ನು  ಬಳಸುತ್ತಾರೆ. ಈ ಸಂಬಂಧ ಚಿಕ್ಕಮಗಳೂರು ವಲಯದಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ