Webdunia - Bharat's app for daily news and videos

Install App

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳ ಬಂಧನ

Webdunia
ಸೋಮವಾರ, 21 ಫೆಬ್ರವರಿ 2022 (20:55 IST)
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳನ್ನು ಶ್ರೀರಾಮಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ತ್ರಿಪುರಾ ಮೂಲದ ಜಾವೇದ್ ಹುಸೇನ್(23), ಮೌಸಿನ್ ಮಿಯಾ(23) ಹಾಗೂ ಅಬ್ದುಲ್ ಅಲಂಗಿರ್(22) ಬಂಧಿತರು. ಆರೋಪಿಗಳಿಂದ 15 ಕೆ.ಜಿ.ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ. 
ಫೆ.19ರಂದು ಬೆಳಗ್ಗೆ 10.30ರ ಸುಮಾರಿಗೆ ಮೂವರು ಅಪರಿಚಿತರು ದ್ವಿಚಕ್ರವಾಹನದಲ್ಲಿ ಗಾಂಜಾ ಇರಿಸಿಕೊಂಡು ಮಾರಾಟಕ್ಕೆ ತೆರಳುತ್ತಿರುವ ಬಗ್ಗೆ ಸ್ಥಳೀಯರು ಪೆÇಲೀಸರಿಗೆ ಮಾಹಿತಿ ನೀಡಿದ್ದರು. ದೊರೆತ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೆÇಲೀಸರು, ಮಾಲುಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳು ನಗರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುಲಭವಾಗಿ ಹೆಚ್ಚಿನ ಹಣ ಸಂಪಾದಿಸುವ ಉದ್ದೇಶದಿಂದ ಡ್ರಗ್ಸ್ ಪೆಡ್ಲಿಂಗ್ ದಂಧೆಗೆ ಇಳಿದಿದ್ದರು. ತವರು ರಾಜ್ಯ ತ್ರಿಪುರಾಕ್ಕೆ ಹೋದಾಗ ಕಡಿಮೆ ದರಕ್ಕೆ ಗಾಂಜಾ ಖರೀದಿಸಿ ಬಳಿಕ ಅದನ್ನು ನಗರಕ್ಕೆ ತಂದು ಗಿರಾಕಿಗಳನ್ನು ಹುಡುಕಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಯಾರಿಗೂ ಅನುಮಾಬಾರದ ಹಾಗೆ ಲಗೇಜ್ ಬ್ಯಾಗ್‍ನಲ್ಲಿ ಗಾಂಜಾ ಇರಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments