Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿದ್ದ ದೇವರಾಜೇಗೌಡಗೆ ಹಳೇ ಕೇಸ್ ಜಡಿದು ಅರೆಸ್ಟ್

Krishnaveni K
ಶನಿವಾರ, 11 ಮೇ 2024 (12:07 IST)
Photo Courtesy X
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸೋರಿಕೆ ಮಾಡಿದ್ದಾರೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಅವರನ್ನು ಈಗ ಹಳೇ ಕೇಸ್ ನಲ್ಲಿ ಬಂಧಿಸಲಾಗಿದೆ.
 
ನಿನ್ನೆ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ದೇವರಾಜೇಗೌಡರನ್ನು ಬಂಧಿಸಲಾಗಿದೆ. ದೇವರಾಜೇಗೌಡ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ತಡವಾಗಿ ಕ್ರಮ ಕೈಗೊಳ್ಳಲಾಗಿದೆ.

ಸೈಟು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬಿಸಿ ಕಾರಿನಲ್ಲಿ ಸುತ್ತಾಡಿಸಿ  ಮೈಕೈ ಮುಟ್ಟಿ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದಾರೆ ಎಂದು ದೇವರಾಜೇಗೌಡ ವಿರುದ್ಧ ದೂರು ದಾಖಲಾಗಿತ್ತು. ಆ ಪ್ರಕರಣದ ಬಗ್ಗೆ ಇಷ್ಟು ತಡವಾಗಿ ಕ್ರಮ ಕೈಗೊಂಡಿರುವುದು ಪ್ರಶ್ನೆ ಹುಟ್ಟುಹಾಕಿದೆ.

ಇದೀಗ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ಪದೇ ಪದೇ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಹೊರಿಸುತ್ತಲೇ ಇದ್ದರು. ಇದರ ಬೆನ್ನಲ್ಲೇ ದೇವರಾಜೇಗೌಡರನ್ನು ಬಂಧಿಸಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ದೇವರಾಜೇಗೌಡ ವಿರುದ್ಧ ಬಲವಾದ ಸಾಕ್ಷಿಯಿದ್ದರೂ ಇದುವರೆಗೆ ಬಂಧಿಸಿರಲಿಲ್ಲ. ಆದರೆ ಈಗ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಬಂಧಿಸಿರುವುದು ಎಲ್ಲರ ಪ್ರಶ್ನೆಗೆ ಕಾರಣವಾಗಿದೆ. ತಮ್ಮ ಬಂಧನದ ಸುಳಿವು ಸಿಗುತ್ತಿದ್ದಂತೇ ದೇವರಾಜೇಗೌಡ ತಲೆಮರೆಸಿಕೊಂಡಿದ್ದರು. ಆದರೆ ಈಗ ಪೊಲೀಸರು ಅವರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ