Webdunia - Bharat's app for daily news and videos

Install App

ದೇವೇಗೌಡ್ರು ಮಾಡಿಸಿದ್ದು ಯಾಗ ಅಲ್ವಂತೆ: ಹಾಗಾದ್ರೆ ಮತ್ತೇನು?

Webdunia
ಸೋಮವಾರ, 6 ಮೇ 2019 (18:55 IST)
ಸತತ ಐದು ಗಂಟೆಗಳ ಕಾಲ ಮೊನ್ನೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದವರ ನಡೆಸಿದ ಪೂಜೆ ಅದು ಯಾಗ ಅಲ್ವಂತೆ.

ಅದು ನಿಖಿಲ್ ಅಥವಾ ಪ್ರಜ್ವಲ್ ಗೆಲುವಿಗೆ ಮಾಡಿಸಿದ ಪೂಜೆಯಲ್ಲ. ಆ ಪೂಜೆಯಲ್ಲಿ ನಿಖಿಲ್ ಮತ್ತು ಪ್ರಜ್ವಲ್ ಹಾಗೂ ನನ್ನ ಮತ್ತು ಕುಮಾರಸ್ವಾಮಿಯವರ ಪತ್ನಿ ಭಾಗಿಯಾಗಿರಲಿಲ್ಲ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಲೋಕ ರಿಸಲ್ಟ್ 23 ರ ನಂತರ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬೀಳಲ್ಲ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಳಕ್ಕೆ ಏಳೂ ಸ್ಥಾನ ಗೆದ್ದರೆ ಆಶ್ಚರ್ಯವಿಲ್ಲ. ಬಿ.ಎಸ್.ಯಡಿಯೂರಪ್ಪ ತಿರುಪತಿಗೆ ಹೋಗಿದ್ದರು. ಈಗ ಜಗದೀಶ್ ಶೆಟ್ಟರ್ ಗೂ ಯಾವುದಾದರೂ ದೇವಸ್ಥಾನಕ್ಕೆ ಹೋಗಲು ಹೇಳಿ ಎಂದು ವ್ಯಂಗ್ಯವಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತಂದೆಗೆ ಇಬ್ಬರು ಪತ್ನಿಯರು. ಆ ಇಬ್ಬರು ಪತ್ನಿಯರು ಹಾಗೂ ದೇವೇಗೌಡರ ಅಜ್ಜಿ ಈ ಮೂವರೂ ಸಹ ಪ್ಲೇಗ್ ನಿಂದ ಮೃತಪಟ್ಟಿದ್ದರು.

ಅವರ ಸದ್ಗತಿ ಆಗಬೇಕೆಂದು ಜ್ಯೋತಿಷಿಗಳು ಸಲಹೆ ಮಾಡಿದ ಹಿನ್ನೆಲೆಯಲ್ಲಿ ನಮ್ಮ ತಂದೆಯವರು ಚಿಕ್ಕಮಗಳೂರಿನ ಕಾಪು ಬಳಿ ಶ್ರಾದ್ಧ ಕರ್ಮ ನೆರವೇರಿಸಿದ್ದಾರೆ. ಇದು ನಿಖಿಲ್ ಅಥವಾ ಪ್ರಜ್ವಲ್ ಗೆಲುವಿಗೆ ಮಾಡಿಸಿದ ಪೂಜೆಯಲ್ಲ. ಆ ಪೂಜೆಯಲ್ಲಿ ನಿಖಿಲ್ ಮತ್ತು ಪ್ರಜ್ವಲ್ ಹಾಗೂ ನನ್ನ ಮತ್ತು ಕುಮಾರಸ್ವಾಮಿಯವರ ಪತ್ನಿ ಭಾಗಿಯಾಗಿರಲಿಲ್ಲ ಎಂದರು.

ನಾವು ಚಿಕ್ಕಮಗಳೂರಿಗೆ ಹೋಗಿದ್ದು ಪೂಜೆ ಮಾಡಿಸಲು ಅಲ್ಲ. ಬದಲಿಗೆ ಪಿಂಡ ಪ್ರದಾನ ಮಾಡುವ ಶ್ರಾದ್ಧ ಕರ್ಮ ಮಾಡಿಸಲು ಹೋಗಿದ್ದೆವು ಅಂತ ಸಚಿವ ರೇವಣ್ಣ ಸ್ಪಷ್ಟನೆ ಕೊಟ್ಟಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಮುಂದಿನ ಸುದ್ದಿ
Show comments