Webdunia - Bharat's app for daily news and videos

Install App

ಮೈತ್ರಿ ಸರ್ಕಾರ ಬೀಳಲು ದೇವೇಗೌಡ ಹಾಗೂ ಅವರ ಮಕ್ಕಳೇ ಕಾರಣ-ಸಿದ್ದರಾಮಯ್ಯ ಆರೋಪ

Webdunia
ಶುಕ್ರವಾರ, 23 ಆಗಸ್ಟ್ 2019 (11:53 IST)
ಬೆಂಗಳೂರು : ನಾನು, ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂದು ದೇವೇಗೌಡ ಹೇಳಿಕೆ ವಿಚಾರಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.




ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರೇವಣ್ಣ, ದೇವೇಗೌಡರೇ ಕಾರಣ , ಎಲ್ಲಾ ಶಾಸಕರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿದ್ದರೆ, ಮೈತ್ರಿ ಸರ್ಕಾರ ಪತನವಾಗುತ್ತಿರಲಿಲ್ಲ. ಏಕಪಕ್ಷೀಯ ನಿರ್ಧಾರ, ಶಾಸಕರು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಹೇಳಿದ್ದಾರೆ.


ಅಲ್ಲದೇ ಸರ್ಕಾರ ಬೀಳಿಸುವಂತಹ ನೀಚ ರಾಜಕಾರಣ ನಾನು ಮಾಡಲ್ಲ. ಅದೇನಿದ್ದರೂ ದೇವೇಗೌಡ, ಅವರ ಮಕ್ಕಳ ಹುಟ್ಟುಗುಣ. ಧರಂಸಿಗ್ ಸರ್ಕಾರವನ್ನು ಬೀಳಿಸಿದವರು ಯಾರು? ಬೊಮ್ಮಾಯಿ ಸರ್ಕಾರವನ್ನು ಬೀಲಿಸಿದವರು ಯಾರು? ರಾತ್ರೋರಾತ್ರಿ ಅವರ ಕ್ಯಾಂಪ್ ಗೆ ಹೋಗಿ ಸೇರಿಕೊಂಡವರ್ಯಾರು? ನಾನು ಯಾವತ್ತು ಅಧಿಕಾರದ ಹಿಂದೆ ಬಿದ್ದವನಲ್ಲ.  ಬಿಜೆಪಿ ಜತೆ ಸರ್ಕಾರ ರಚಿಸಿದ್ರೆ ನನ್ನಹೆಣದ ಮೇಲೆ ರಚಿಸಲಿ ಎಂದು ದೇವೇಗೌಡರು ಹೇಳಿದ್ದರು. ಆದ್ರೆ ಹೆಚ್ ಡಿಡಿ ಸಹಕಾರವಿಲ್ಲದೆ ಬಿಜೆಪಿ ಜತೆ ಸರ್ಕಾರ ಸಾಧ್ಯವಿಲ್ಲ. ಹಾಗಾಗಿ ನಿಜವಾದ ವಚನ ಭ್ರಷ್ಟರು ಯಾರು? ಎದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments