ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ದೇವೇಗೌಡರ ನಿರ್ಧಾರವೇ ಅಂತಿಮ : ಹೆಚ್.ಡಿ. ರೇವಣ್ಣ

Webdunia
ಬುಧವಾರ, 9 ಆಗಸ್ಟ್ 2023 (09:51 IST)
ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೊಡುವ ಬಗ್ಗೆ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ವಿಷಯಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ ವಿಚಾರದಲ್ಲಿ ದೇವೇಗೌಡರು, ಕುಮಾರಸ್ವಾಮಿ ನಿರ್ಧಾರವೇ ಅಂತಿಮ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವೂ ಅವರೇ ತೀರ್ಮಾನ ಮಾಡ್ತಾರೆ ಎಂದರು. 

ಪಕ್ಷ ಏನ್ ತೀರ್ಮಾನ ಮಾಡುತ್ತೋ ಅದೇ ಅಂತಿಮ. ಅದಕ್ಕೆ ನಾವು ಬದ್ದ. ವಿಧಾನಸಭೆ ಚುನಾವಣೆಯಲ್ಲೂ ಭವಾನಿ ವಿಚಾರದಲ್ಲಿ ಇದೇ ಹೇಳಿದ್ದೆವು. ಜನಾಭಿಪ್ರಾಯಕ್ಕೆ ಭವಾನಿ ನಿಲ್ಲಬೇಕು ಅಂತ ಇತ್ತು. ಆದರೆ ಪಕ್ಷದ ತೀರ್ಮಾನದಂತೆ ನಾವು ಒಪ್ಪಿಕೊಂಡ್ವಿ ಅಂತ ವಿಧಾನಸಭೆ ಚುನಾವಣೆ ಬಗ್ಗೆ ಮೆಲುಕು ಹಾಕಿದರು.

ಎಲ್ಲರಿಗೂ ದೇವೇಗೌಡರ ಕುಟುಂಬ ಮಾತ್ರ ಕಾಣಿಸೋದು. ಹೇಗಿದ್ರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ಕುಟುಂಬದವರು ಯಾರು ನಿಲ್ಲೋದು ಬೇಡ ಅಂತ ಒಂದು ಬಿಲ್ ತನ್ನಿ. ಕುಟುಂಬದವರು ಸ್ಪರ್ಧೆ ಮಾಡಬಾರದು ಅಂತ ಬಿಲ್ ತಂದರೆ ನಾವು ಬೆಂಬಲ ಕೊಡ್ತೀವಿ. ಇಲ್ಲ ಅಂದರೆ ಕೇವಲ ರಾಷ್ಟ್ರೀಯ ಪಕ್ಷದವರ ಕುಟುಂಬವರು ಮಾತ್ರ ಸ್ಪರ್ಧೆ ಮಾಡಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments