Select Your Language

Notifications

webdunia
webdunia
webdunia
webdunia

ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ

ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ
ಹಾಸನ , ಬುಧವಾರ, 12 ಏಪ್ರಿಲ್ 2023 (12:04 IST)
ಹಾಸನ : ಟಿಕೆಟ್ ವಿಚಾರದಲ್ಲಿ ನಮ್ಮ ಸರ್ವೋಚ್ಛ ನಾಯಕರಾದ ಹೆಚ್.ಡಿ. ದೇವೇಗೌಡರ ನಿರ್ಧಾರವೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.
 
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕುಟುಂಬ ಸಮೇತವಾಗಿ ಆನೆಕೆರೆಯಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದೇವೇಗೌಡರಿಗೆ 60 ವರ್ಷದ ರಾಜಕೀಯ ಅನುಭವ ಇದೆ.

ಅವರ ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ ಕೇಳುತ್ತೇನೆ, ಮುಂದೆಯೂ ಕೇಳುತ್ತೇನೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಪುಟಿನ್ : ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ