ದೇವೇಗೌಡರ ಕುಟುಂಬ ಮುಗಿಸೋಕೆ ಸಾಧ್ಯ… ಎಂದೋರಾರು?

Webdunia
ಭಾನುವಾರ, 15 ಡಿಸೆಂಬರ್ 2019 (14:59 IST)
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಹಾಗೂ ಪಕ್ಷವನ್ನು ಮುಗಿಸೋಕೆ ಸಾಧ್ಯವೇ ಇಲ್ಲ.

ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ದೇಶದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೆ ಜನರ ಮತ್ತು ದೇವರ ಆಶೀರ್ವಾದ ಇರುವ ತನಕ ಯಾವ ಪಕ್ಷದವರು ರಾಜಕೀಯವಾಗಿ ದೇವೇಗೌಡರನ್ನು ಹಾಗೂ ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎಲ್.ದೇವರಾಜು ಅವರನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.

ಕೆಆರ್ಪೇಟೆ ಪಟ್ಟಣದ ನಂಜಮ್ಮ-ಮುದ್ದೇಗೌಡ ಸಮುದಾಯ ಭವನದಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಕಾರ್ಯಕರ್ತರ ಕೃತಜ್ಞತಾ  ಸಭೆಯಲ್ಲಿ ಮಾತನಾಡಿದ್ರು. 

ಜೆಡಿಎಸ್ ಪಕ್ಷವು ಕನ್ನಡ ನಾಡಿನ ಪ್ರಾದೇಶಿಕ ಪಕ್ಷವಾಗಿದೆ. ಪಕ್ಷವು ಹಲವು ಬಾರಿ ಸೋತಿದೆ. ಮತ್ತೊಮ್ಮೆ ಭರ್ಜರಿ ಜಯ ಸಾಧಿಸಿದೆ. ಪಕ್ಷವು ಯಾವುದೇ ಕಾರಣಕ್ಕೂ ನಾಶವಾಗುವುದಿಲ್ಲ.  ಸೋಲಿಗೆ ಹೆದರಬೇಕಿಲ್ಲ. ನಮ್ಮಿಂದ ನಾವು ಸೋತಿದ್ದೀವಿ. ನಾಯಕರನ್ನು ದೂಷಣೆ ಮಾಡಲ್ಲ.

ಇಲ್ಲಿ ಕಾಂಗ್ರೆಸ್ ಸೋಲುತ್ತದೆ ಅಂತಾ ಗೊತ್ತಾಯ್ತು. ಇಲ್ಲಿ ಬಿಜೆಪಿ, ಹುಣಸೂರಲ್ಲಿ ಕಾಂಗ್ರೆಸ್ ಒಳ ಒಪ್ಪಂದ ಆಗಿ ಒಳೇಟು ಆಗಿದೆ. ಇದು ನನಗೆ ಗೊತ್ತಾಗಿ. ಪುಟ್ಟರಾಜು ಮತ್ತು  ದೇವರಾಜು ಅವರಿಗೆ ಹೇಳಿದ್ದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments