Webdunia - Bharat's app for daily news and videos

Install App

ದೇವೇಗೌಡರ ಕುಟುಂಬ ಮುಗಿಸೋಕೆ ಸಾಧ್ಯ… ಎಂದೋರಾರು?

Webdunia
ಭಾನುವಾರ, 15 ಡಿಸೆಂಬರ್ 2019 (14:59 IST)
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಹಾಗೂ ಪಕ್ಷವನ್ನು ಮುಗಿಸೋಕೆ ಸಾಧ್ಯವೇ ಇಲ್ಲ.

ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ದೇಶದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೆ ಜನರ ಮತ್ತು ದೇವರ ಆಶೀರ್ವಾದ ಇರುವ ತನಕ ಯಾವ ಪಕ್ಷದವರು ರಾಜಕೀಯವಾಗಿ ದೇವೇಗೌಡರನ್ನು ಹಾಗೂ ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎಲ್.ದೇವರಾಜು ಅವರನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.

ಕೆಆರ್ಪೇಟೆ ಪಟ್ಟಣದ ನಂಜಮ್ಮ-ಮುದ್ದೇಗೌಡ ಸಮುದಾಯ ಭವನದಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಕಾರ್ಯಕರ್ತರ ಕೃತಜ್ಞತಾ  ಸಭೆಯಲ್ಲಿ ಮಾತನಾಡಿದ್ರು. 

ಜೆಡಿಎಸ್ ಪಕ್ಷವು ಕನ್ನಡ ನಾಡಿನ ಪ್ರಾದೇಶಿಕ ಪಕ್ಷವಾಗಿದೆ. ಪಕ್ಷವು ಹಲವು ಬಾರಿ ಸೋತಿದೆ. ಮತ್ತೊಮ್ಮೆ ಭರ್ಜರಿ ಜಯ ಸಾಧಿಸಿದೆ. ಪಕ್ಷವು ಯಾವುದೇ ಕಾರಣಕ್ಕೂ ನಾಶವಾಗುವುದಿಲ್ಲ.  ಸೋಲಿಗೆ ಹೆದರಬೇಕಿಲ್ಲ. ನಮ್ಮಿಂದ ನಾವು ಸೋತಿದ್ದೀವಿ. ನಾಯಕರನ್ನು ದೂಷಣೆ ಮಾಡಲ್ಲ.

ಇಲ್ಲಿ ಕಾಂಗ್ರೆಸ್ ಸೋಲುತ್ತದೆ ಅಂತಾ ಗೊತ್ತಾಯ್ತು. ಇಲ್ಲಿ ಬಿಜೆಪಿ, ಹುಣಸೂರಲ್ಲಿ ಕಾಂಗ್ರೆಸ್ ಒಳ ಒಪ್ಪಂದ ಆಗಿ ಒಳೇಟು ಆಗಿದೆ. ಇದು ನನಗೆ ಗೊತ್ತಾಗಿ. ಪುಟ್ಟರಾಜು ಮತ್ತು  ದೇವರಾಜು ಅವರಿಗೆ ಹೇಳಿದ್ದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments