Select Your Language

Notifications

webdunia
webdunia
webdunia
webdunia

ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ

ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ
ಬೆಂಗಳೂರು , ಭಾನುವಾರ, 30 ಜುಲೈ 2017 (11:37 IST)
ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ ರೂಪಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
 
ಮುಂದಿನ ತಿಂಗಳು ಬಂಡಾಯ ಶಾಸಕರ ಕ್ಷೇತ್ರಗಳಲ್ಲಿ ಸರಣಿ ಸಮಾವೇಶ ನಡೆಸುವ ಮೂಲಕ ಹಣಿಯಲು ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಬಂಡಾಯ ಶಾಸಕರು ಜೆಡಿಎಸ್‌ಗೆ ಸವಾಲು ಹಾಕುತ್ತಿರುವುದರಿಂದ ಅವರಿಗೆ ಅವರ ಕ್ಷೇತ್ರದಲ್ಲಿಯೇ ತಿರುಗೇಟು ನೀಡಲು ಜೆಡಿಎಸ್ ನಿರ್ಧರಿಸಿದೆ.
 
ಕೆಲ ದಿನಗಳ ಹಿಂದೆ ಬಂಡಾಯ ಶಾಸಕ ಜಮೀರ್ ಅಹ್ಮದ್, ಜೆಡಿಎಸ್ ವರಿಷ್ಠರಿಗೆ ಸವಾಲು ಹಾಕಿ ತಮ್ಮ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದಲ್ಲಿ ರುಂಡ ಕತ್ತರಿಸಿ ಇಡುವುದಾಗಿ ಬಹಿರಂಗ ಹೇಳಿಕೆ ನೀಡಿದ್ದರು.
 
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸರಣಿ ಸಮಾವೇಶಗಳ ಹೊಣೆ ಹೊತ್ತುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿಡಿಯೋ ಗೇಮ್ ನಲ್ಲಿ ತಲ್ಲೀನನಾದ ಈ ಯುವಕ ಏನು ಮಾಡಿದ ನೋಡಿ...