Webdunia - Bharat's app for daily news and videos

Install App

ಗೌರಿ-ಗಣೇಶ ಹಬ್ಬದ ಶುಭ ಕೋರಿದ ದೇವೇಗೌಡರು

Webdunia
ಗುರುವಾರ, 9 ಸೆಪ್ಟಂಬರ್ 2021 (11:57 IST)
ಬೆಂಗಳೂರು, ಸೆ.9 : ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋರಿದ್ದಾರೆ. ಕೊರೊನಾ ಮಹಾಮಾರಿಯ ಸಂಕಷ್ಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಆತಂಕ ಮತ್ತು ಭಯ ಮನೆ ಮಾಡಿರುವ ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಗೌರಿ ಮತ್ತು ಗಣೇಶ ಹಬ್ಬ ಆಚರಿಸುತ್ತಿದ್ದೇವೆ. ಭಕ್ತಿ, ಸಂಭ್ರಮದಿಂದ ಆಚರಿಸಬೇಕಾಗಿದ್ದ ಹಬ್ಬಕ್ಕೆ ಕಾರ್ಮೋಡ ಕವಿದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸ್ತಿಕರ ಶ್ರದ್ಧೆ ಕಡಿಮೆಯಾಗಿಲ್ಲ. ಸರ್ವಮಂಗಳ ಮಾಂಗಲ್ಯೆ ಆದ ಗೌರಿ ಮತ್ತು ವಿಘ್ನ ನಿವಾರಕ ಗಣೇಶ ಈ ಸಂಕಷ್ಟದಿಂದ ನಮ್ಮ ರಾಷ್ಟ್ರ ಮತ್ತು ನಾಡನ್ನು ಪಾರು ಮಾಡಲಿ ಎಂದು ಗೌಡರು ಪ್ರಾರ್ಥಿಸಿದ್ದಾರೆ.
ರಾಜ್ಯದ ಸಮಸ್ತ ಜನತೆಗೆ ಆರೋಗ್ಯ ಭಾಗ್ಯ, ನೆಮ್ಮದಿ, ಸಮೃದ್ಧಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಹಬ್ಬದ ಆಚರಣೆ ಉತ್ಸಾಹದಲ್ಲಿ ಉದಾಸೀನ ಬೇಡ. ಎಲ್ಲರೂ ಕೊರೊನಾ ನಿವಾರಕ ಮಾರ್ಗದರ್ಶಿ ಸೂತ್ರಗಳನ್ನು ತಪ್ಪದೆ ಪಾಲಿಸೋಣ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments