Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಸಿಎಂ ಆಗಲು ಜೆಡಿಎಸ್ ಉಳಿಸಿ ಎನ್ನುತ್ತಿಲ್ಲ: ದೇವೇಗೌಡ ಸ್ಪಷ್ಟನೆ

ಕುಮಾರಸ್ವಾಮಿ
ಮಂಡ್ಯ , ಶುಕ್ರವಾರ, 27 ಜನವರಿ 2017 (18:08 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪಕ್ಷ ಉಳಿಸಿ ಅಂತಿಲ್ಲ. ಪಕ್ಷ ಉಳಿದರೇ ಮಾತ್ರ ಕುಮಾರಸ್ವಾಮಿ ಉಳಿಯೋದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.
 
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ, ಕಾವೇರಿ ವಿವಾದ ಸೇರಿದಂತೆ ದೊಡ್ಡ ಜವಾಬ್ದಾರಿಗಳು ಕುಮಾರಸ್ವಾಮಿಗಿದೆ. ವಿವಾದಗಳು ಇತ್ಯರ್ಥವಾಗಬೇಕಾದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲೇ ಬೇಕು ಎಂದರು.
 
ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಜೆಡಿಎಸ್ ಪಕ್ಷ ಉಳಿಸಿ ಅಂತಿಲ್ಲ. ಪಕ್ಷ ಉಳಿದರೇ ಮಾತ್ರ ಕುಮಾರಸ್ವಾಮಿ ಉಳಿಯೋದು. ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ನಾವೆಲ್ಲ ಸೇರಿ ಒಗ್ಗಟ್ಟಾಗಿ ದುಡಿಯಬೇಕಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
 
ಕೆಲವು ದುಷ್ಟಶಕ್ತಿಗಳು ಜಾತಿಯ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸುತ್ತಿವೆ. ಆದರೆ, ಕುಮಾರಸ್ವಾಮಿ ನಾಯಕತ್ವದಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಭರವಸೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಾಫಿಕ್ ಪೊಲೀಸ್ ಆದ ಸಚಿವ ಯು.ಟಿ.ಖಾದರ್!