Webdunia - Bharat's app for daily news and videos

Install App

ನನಗೆ ಬೆಳೆಸುವುದೂ ಗೊತ್ತು, ಪಕ್ಷದಿಂದ ಹೊರಹಾಕುವುದು ಗೊತ್ತು: ದೇವೇಗೌಡ

Webdunia
ಶನಿವಾರ, 21 ಅಕ್ಟೋಬರ್ 2017 (19:27 IST)
ರಾಮನಗರ:  ಪ್ರಜ್ವಲ್ ರೇವಣ್ಣ ಮಾಧ್ಯಮಗಳ ಎದುರು ಮಾತನಾಡುವುದನ್ನೇ ಕೆಲವರು ಮನರಂಜನೆ ಎಂದುಕೊಂಡಿದ್ದಾರೆ. ಆದರೆ ನಾನು ಮನರಂಜನೆಗೆ ಅವಕಾಶ ನೀಡುವುದಿಲ್ಲ. ನನಗೆ ಬೆಳೆಸುವುದೂ ಗೊತ್ತು. ತೀರಾ ಚೇಷ್ಠೆ ಮಾಡಿದರೆ ಹೊರಹಾಕುವುದೂ ಸಹ ಗೊತ್ತು ಎಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಮೊಮ್ಮಗನ ವಿರುದ್ಧ ಗುಡುಗಿದ್ದಾರೆ.

ಮ್ಯಾಗ್ನೋಲಿಯಾ ಕ್ಲಬ್‌ನಲ್ಲಿ ಮಾತನಾಡಿದ ಅವರು, ರೇವಣ್ಣನ ಮಗ ಪ್ರಜ್ವಲ್ ರಾಜಕೀಯದಲ್ಲಿ ಬೆಳೆಯುವುದು ನಿಶ್ಚಿತ. ಅದನ್ನು ತಪ್ಪಿಸೋಕೆ ಯಾರಿಂದಲೂ ಆಗುವುದಿಲ್ಲ. ಅವರ ಹಣೆಬರಹ ಏನಿದೆಯೋ ಅದನ್ನು ತಪ್ಪಿಸಲು ನಾವ್ಯಾರು ಎಂದರು.

ಹಲವು ಜನ ಯುವಕರಿದ್ದಾರೆ. ರೇವಣ್ಣನ ಮಗ ಒಬ್ಬನೇನಾ? ನಿಖಿಲ್ ಅವನ ತಂದೆಗೋಸ್ಕರ ದುಡಿಯುತ್ತೇನೆ ಅಂದಿಲ್ವಾ? ಅನೇಕ ಯುವಕರು ತಾಮುಂದು, ನಾಮುಂದು ಅಂತಾರೆ. ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ನಮಗೆ 120 ಸ್ಥಾನ ದಾಟಬೇಕು ಎಂಬ ಹಠವಿದೆ. ಪಕ್ಷದಲ್ಲಿ ಪ್ರತಿಯೊಂದು ಸೀಟನ್ನು ಗೆಲ್ಲುವ ನಿಟ್ಟಿನಲ್ಲಿ ಲೆಕ್ಕಾಚಾರ ಮಾಡುತ್ತೇವೆ ಎಂದು ದೇವೇಗೌಡ ಹೇಳಿದರು. 

ಚನ್ನಪಟ್ಟಣದಲ್ಲಿ ಯಾರಿಗೂ ಅಷ್ಟು ಸುಲಭವಾಗಿ ಟಿಕೆಟ್ ನೀಡುವುದಿಲ್ಲ. ಕೆಲವರು ಯಾವ ಮಟ್ಟಕ್ಕೆ ಮಾತನಾಡುತ್ತಾರೆ ಅಂದರೆ ಅರ್ಜಿ ಹಾಕಿದ್ರೆ ಕರೆದುಕೊಂಡು ಬಂದು ನಿಲ್ಲಿಸುತ್ತೇವೆ ಅಂತಾರೆ. ಈ ಬಗ್ಗೆ ಎಕ್ಸಸೈಜ್ ಮಾಡಬೇಡಿ, ಅದರ ಅವಶ್ಯಕತೆ ಇಲ್ಲ. ಬೇರೆ ಯಾರಾದರೂ ಚನ್ನಪಟ್ಟಣದಲ್ಲಿ ಗುರ್ತಿಸಿಕೊಳ್ಳಬೇಕು ಅಂತ ಹೇಳಿದ್ದೇವೆ ಎಂದು ಜೆಡಿಎಸ್‌ ವರಿಷ್ಠರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments