Webdunia - Bharat's app for daily news and videos

Install App

ಸಮ್ಮಿಶ್ರ ಸರ್ಕಾರ ಉಳಿಸಲು ಮನೆಯಲ್ಲೇ ಕೂತು ದೇವೇಗೌಡರ ತಂತ್ರ

Webdunia
ಮಂಗಳವಾರ, 18 ಸೆಪ್ಟಂಬರ್ 2018 (11:16 IST)
ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಅಪಾಯ ತಪ್ಪಿಸಲು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಮ್ಮ ನಿವಾಸದಲ್ಲಿಯೇ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ನ ಬಂಡಾಯ ಶಾಸಕರ ನಡೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ದೇವೇಗೌಡರು ಸರ್ಕಾರ ಉಳಿಸಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ತಮ್ಮ ಕಾವೇರಿ ನಿವಾಸದಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ. ಅತ್ತ ಬಿಜೆಪಿ ಸರ್ಕಾರದ ನಡೆ ನೋಡಿಕೊಂಡು ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments