ಹೇಮಾವತಿ ಜಲಾಶಯದಿಂದ ಹೊರ ಹರಿವು ಸ್ಥಗಿತಗೊಳಿಸುವಂತೆ ಆಗ್ರಹಿಸಿರುವ ರಾಜ್ಯ ಜೆಡಿಎಸ್ ಘಟಕ, ಹೊರ ಹರಿವು ಸ್ಥಗಿತಗೊಳಿಸದಿದ್ದರೇ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದೆ.
ಗೊರೊರಿನಲ್ಲಿರುವ ಹೇಮಾವತಿ ಜಲಾಶಯದಿಂದ ಇಂದು ರಾತ್ರಿಯೊಳಗೆ ಹೊರ ಹರಿವು ಸ್ಥಗಿತಗೊಳಿಸದಿದ್ದರೇ ನಾಳೆಯಿಂದ ಉಗ್ರ ಹೋರಾಟ ಕೈಗೊಳ್ಳುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ನಾಳೆ ನಡೆಯುವ ಪ್ರತಿಭಟನೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲಿದ್ದಾರೆ. ಈ ವೇಳೆ ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಒಂದು ವೇಳೆ ಅನಾಹುತಗಳು ಸಂಭವಿಸಿದರೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ