Webdunia - Bharat's app for daily news and videos

Install App

ದೊಡ್ಡಗೌಡರ ಕೊನೆಯ ಲೋಕಸಭಾ ಚುನಾವಣೆಯ ತೀರ್ಪು ಇಂದು

Webdunia
ಶುಕ್ರವಾರ, 16 ಮೇ 2014 (08:08 IST)
ಇಂದು 16 ನೇ ಲೋಕಸಭಾ ಚುನಾವಣೆಯ ಫಲಿತಾಂಶ. ಮುಂದಿನ ಐದು ವರ್ಷಗಳಲ್ಲಿ ಭವ್ಯ ಭಾರತವನ್ನು ನಿರ್ಮಾಣಕ್ಕಾಗಿ ಮತದಾರರು ನೀಡಿರುವ ತೀರ್ಪನ್ನು ಇಂದು ಪ್ರಕಟಿಸುವ ಸುದಿನ. ತಮ್ಮನ್ನೇ ಗೆಲ್ಲಿಸುವಂತೆ ಎಲ್ಲ ಅಭ್ಯರ್ಥಿಗಳೂ ಬೆಳಿಗ್ಗೆಯಿಂದಲೇ ದೇವರ ಮೊರೆ ಹೋಗುತ್ತಿರುವುದಂತೂ ಸತ್ಯ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ತೊಡಗಿದ್ದರೆ. ಯಾವುದನ್ನೂ ತಲೆ ಕೆಡಿಸಿಕೊಳ್ಳದೇ ನಿರಾಳವಾಗಿ ನಿರುಮ್ಮಳವಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಏಕೈಕ ವ್ಯಕ್ತಿ ಎಚ್.ಡಿ.ದೇವೇಗೌಡರು!.
 
ಹೌದು, ತಮ್ಮ ಕೊನೆಯ ಲೋಕಸಭಾ ಚುನಾವಣೆಯನ್ನು ಎದುರಿಸಿರುವ ನಮ್ಮ ದೊಡ್ಡಗೌಡರು ಅರ್ಥಾತ್ ದೇವೇಗೌಡರು ಎಲ್ಲಿಯೂ ಮುಖ್ಯವಾಹಿನಿಯಲ್ಲಿ ತಮ್ಮ ಮುಖವನ್ನೇ ತೋರಿಸಿಲ್ಲ. ನಿಗೂಢ ರಾಜಕೀಯ ನಡೆಗಳಿಂದಲೇ ಹೆಸರುವಾಸಿಯಾದ ಜೆಡಿಎಸ್ ಧುರೀಣ, ಎಲ್ಲಾ ರಾಜಕೀಯ ಚುನಾವಣಾ ಫಲಿತಾಂಶಗಳನ್ನು ಈಗಾಗಲೇ ಲೆಕ್ಕಾಚಾರ ಮಾಡಿದ್ದಾರೆಂಬುದು ಹಲವರ ಆಂಬೋಣ. ಹಾಸನ ಲೋಕಸಭಾ ಚುನಾವಣೆಯಲ್ಲಿ ಕೊನೆಯದಾಗಿ ಸ್ಪರ್ಧಿಸಿರುವ ಅವರು ಲಕ್ಷಕ್ಕಿಂತಲೂ ಹೆಚ್ಚಿನ ಲೀಡ್‌ನಲ್ಲಿ ಗೆಲ್ಲುತ್ತಾರೆಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

ಏನೇ ಆಗಲಿ, ಕರ್ನಾಟಕದಲ್ಲಿ ಜೆಡಿಎಸ್ ಗಳಿಸಲಿರುವ ಸ್ಥಾನಗಳು ಈಗಾಗಲೇ ನಿಕ್ಕಿಯಾಗಿವೆಯಾದರೂ, ನಿಖರ ಫಲಿತಾಂಶವನ್ನು ಕಾದುನೋಡಬೇಕಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments