Select Your Language

Notifications

webdunia
webdunia
webdunia
Saturday, 12 April 2025
webdunia

ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ-ದೇವೇಗೌಡ ಜಂಟಿ ಪ್ರಚಾರ!

ಸಿದ್ದರಾಮಯ್ಯ
ಶಿವಮೊಗ್ಗ , ಮಂಗಳವಾರ, 23 ಅಕ್ಟೋಬರ್ 2018 (09:04 IST)
ಶಿವಮೊಗ್ಗ: ಬಿಜೆಪಿ ಭದ್ರಕೋಟೆಯಾದ ಶಿವಮೊಗ್ಗ ಲೋಕಸಭೆ ಉಪಚುನಾವಣೆಗೆ ಸ್ಟಾರ್ ಕಳೆ ಬಂದಿದ್ದು, ಇಲ್ಲಿ ಜೆಡಿಎಸ್ ಗೆಲ್ಲಿಸಲು ಸಿದ್ದರಾಮಯ್ಯ ಮತ್ತು ದೇವೇಗೌಡರು ಜಂಟಿಯಾಗಿ ಪ್ರಚಾರ ಮಾಡಲಿದ್ದಾರೆ.
 

ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಲಿರುವ ದೇವೇಗೌಡರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ. ನಾಳೆಯಿಂದ ವಿದೇಶ ಪ್ರವಾಸ ಕೈಗೊಳ್ಳಲಿರುವ ದೇವೇಗೌಡರು ವಾಪಸಾದ ಬಳಿಕ ಅಕ್ಟೋಬರ್ 29 ರಂದು ಸಿದ್ದರಾಮಯ್ಯ-ದೇವೇಗೌಡರು ಜತೆಯಾಗಿ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದುವರೆಗೆ ಬದ್ಧ ವೈರಿಗಳಾಗಿದ್ದ ಸಿದ್ದರಾಮಯ್ಯ-ದೇವೇಗೌಡರು ಮೊನ್ನೆಯಷ್ಟೇ ವೇದಿಕೆ ಹಂಚಿಕೊಂಡು ಅಗತ್ಯ ಬಂದರೆ ಜತೆಯಾಗಿ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಅದೇ ರೀತಿ ಇದೀಗ ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ ತವರಿನಲ್ಲಿ ಬಿಜೆಪಿ ಕೋಟೆ ಬೇಧಿಸಿ ಜೆಡಿಎಸ್ ಬಾವುಟ ಹಾರಿಸಲು ಶತ ಪ್ರಯತ್ನ ನಡೆಸಲಿದ್ದಾರೆ. ಇಲ್ಲಿ ಜೆಡಿಎಸ್ ನಿಂದ ಮಧು ಬಂಗಾರಪ್ಪ ಕಣಕ್ಕಿಳಿದಿದ್ದಾರೆ. ಇನ್ನು ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಇದ್ದಕ್ಕಿದ್ದ ಹಾಗೆ ಕೊತ್ತಂಬರಿ ಸೊಪ್ಪು ಬೆಲೆ ಗಗನಕ್ಕೇರಿದ್ದು ಹೇಗೆ ಗೊತ್ತಾ?!