Webdunia - Bharat's app for daily news and videos

Install App

ಇಷ್ಟೆಲ್ಲಾ ಆದ್ರೂ ದೇವೇಗೌಡರು ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ: ಶಿವರಾಮೇಗೌಡ

Krishnaveni K
ಸೋಮವಾರ, 20 ಮೇ 2024 (09:20 IST)
Photo Courtesy: Twitter
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಜಿ ಸಂಸದ ಎಸ್.ಆರ್. ಶಿವರಾಮೇಗೌಡ ಮತ್ತು ದೇವರಾಜೇಗೌಡ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯೊಂದು ಈಗ ವೈರಲ್ ಆಗಿದೆ.

ಎಲ್. ಶಿವರಾಮೇಗೌಡ ಈ ವಿಡಿಯೋ ಪ್ರಕರಣದ ರೂವಾರಿ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಜೊತೆ ನಡೆಸಿದ ಸಂಭಾಷಣೆಯೊಂದು ಈಗ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಜೊತೆ ಕೈ ಜೋಡಿಸುವಂತೆ ದೇವರಾಜೇಗೌಡಗ ಶಿವರಾಮೇಗೌಡ ಹೇಳುತ್ತಿದ್ದಾರೆ ಎನ್ನಲಾದ ಸಂಭಾಷಣೆ ತುಣುಕು ವೈರಲ್ ಆಗಿದೆ.

ಈ ಸಂಭಾಷಣೆಯಲ್ಲಿ ಶಿವರಾಮೇಗೌಡ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಬಲಿಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಡಿಕೆ ಶಿವಕುಮಾರ್ ಜೊತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಮಾಡುತ್ತಾರೆ. ಜೆಡಿಎಸ್ ನ್ನು ಎನ್ ಡಿಎನಿಂದ ಹೊರಹಾಕಲು ನಾನೇ ಮೋದಿಯವರಿಗೆ ಒತ್ತಾಯ ಮಾಡುತ್ತೇನೆ. ನಿಮ್ಮ ಬಳಿ ಏನೇನು ವಿಡಿಯೋಗಳಿವೆಯೋ ಅದನ್ನೆಲ್ಲಾ ನನಗೆ ಕೊಡಿ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ. ಅಷ್ಟಕ್ಕೂ ದೇವೇಗೌಡರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ’ ಎನ್ನುತ್ತಾರೆ.

ಇದಕ್ಕೆ ಪ್ರತಿಯಾಗಿ ದೇವರಾಜೇಗೌಡ ‘ಇದು ಹೆಣ್ಣು ಮಕ್ಕಳ ಮಾನದ ಪ್ರಶ್ನೆಯಲ್ವಾ? ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎನ್ನುತ್ತಾರೆ. ಅದಕ್ಕೆ ಶಿವರಾಮೇಗೌಡ ‘ನಿಮಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ ನೀವೇನು ಹಾಸನದಲ್ಲಿ ಪೆನ್ ಡ್ರೈವ್ ಹಂಚಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ’ ಎಂದು ಪ್ರಶ್ನಿಸುತ್ತಾರೆ. ಅಲ್ಲದೆ, ಕುಮಾರಸ್ವಾಮಿಯವರೇ ವಿಡಿಯೋ ಲೀಕ್ ಮಾಡಲು ಹೇಳಿದರು ಎಂದೂ ಹೇಳು ಎಂದು ಒತ್ತಾಯಿಸುತ್ತಾರೆ. ಈ ಅಡಿಯೋ ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments